ಹಣಕಾಸು ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ 
ರಾಜಕೀಯ

ಹಣಕಾಸು ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ವಿಧಾನಸಭೆಯಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಬಹುಮತ ಸಾಬೀತಾದ ಕೂಡಲೇ ಧನವಿನಿಯೋಗ ವಿಧೇಯಕವೂ ಧ್ವನಿಮತದಿಂದ ಅಂಗೀಕಾರಗೊಂಡಿತು.

ಬೆಂಗಳೂರು: ವಿಧಾನಸಭೆಯಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಬಹುಮತ ಸಾಬೀತಾದ ಕೂಡಲೇ  ಧನವಿನಿಯೋಗ ವಿಧೇಯಕವೂ ಧ್ವನಿಮತದಿಂದ ಅಂಗೀಕಾರಗೊಂಡಿತು. 
ಹಿಂದಿನ ಮುಖ್ಯ ಮಂತ್ರಿ  ಎಚ್.ಡಿ. ಕುಮಾರಸ್ವಾಮಿ  ಅವರು ಮಂಡಿಸಿದ್ದ ಬಜೆಟ್ ಪ್ರಸ್ತಾವನೆಗೆ ಸದನ ಒಪ್ಪಿಗೆ ಕೊಡಬೇಕು ಎಂದು ಸಭಾ ನಾಯಕ  ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿದ ಮನವಿ ನಂತರ ಹಣಕಾಸು ವಿಧೇಯಕಕ್ಕೆ ಸದನ ಧ್ವನಿಮತದ ಅಂಗೀಕಾರ ನೀಡಿತು.
ಮೂರು ತಿಂಗಳ ಲೇಖಾನುದಾನಕ್ಕೆ ಸದನ ಒಪ್ಪಿಗೆ ನೀಡಿದೆ. 3,327 ಕೋಟಿ ರೂಪಾಯಿ ಪೂರಕ ಬಜೆಟ್‌ ಗೂ ಸದನ ಇಂದು ಧ್ವನಿಮತದ ಮೂಲಕ ಅಂಗೀಕಾರ ನೀಡಿತು. 
ಬಜೆಟ್ ಮೇಲೆ ಸಮಗ್ರ ಚರ್ಚೆಯಾಗಬೇಕು, ಹೀಗಾಗಿ ಮೂರು ತಿಂಗಳ ಲೇಖಾನುದಾನಕ್ಕೆ ಸರ್ಕಾರ ಒಪ್ಪಿಗೆ ಪಡೆಯಲು ತಕರಾರು ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದರು.  ನಂತರ ಮೂರು ತಿಂಗಳ ಲೇಖಾನುದಾನಕ್ಕೆ ಸದನ ಒಪ್ಪಿಗೆ ನೀಡಿತು. ಬಳಿಕ ಕಲಾಪವನ್ನು ಸಂಜೆ 5 ಗಂಟೆಗೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT