ಹಣಕಾಸು ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ 
ರಾಜಕೀಯ

ಹಣಕಾಸು ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ವಿಧಾನಸಭೆಯಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಬಹುಮತ ಸಾಬೀತಾದ ಕೂಡಲೇ ಧನವಿನಿಯೋಗ ವಿಧೇಯಕವೂ ಧ್ವನಿಮತದಿಂದ ಅಂಗೀಕಾರಗೊಂಡಿತು.

ಬೆಂಗಳೂರು: ವಿಧಾನಸಭೆಯಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಬಹುಮತ ಸಾಬೀತಾದ ಕೂಡಲೇ  ಧನವಿನಿಯೋಗ ವಿಧೇಯಕವೂ ಧ್ವನಿಮತದಿಂದ ಅಂಗೀಕಾರಗೊಂಡಿತು. 
ಹಿಂದಿನ ಮುಖ್ಯ ಮಂತ್ರಿ  ಎಚ್.ಡಿ. ಕುಮಾರಸ್ವಾಮಿ  ಅವರು ಮಂಡಿಸಿದ್ದ ಬಜೆಟ್ ಪ್ರಸ್ತಾವನೆಗೆ ಸದನ ಒಪ್ಪಿಗೆ ಕೊಡಬೇಕು ಎಂದು ಸಭಾ ನಾಯಕ  ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿದ ಮನವಿ ನಂತರ ಹಣಕಾಸು ವಿಧೇಯಕಕ್ಕೆ ಸದನ ಧ್ವನಿಮತದ ಅಂಗೀಕಾರ ನೀಡಿತು.
ಮೂರು ತಿಂಗಳ ಲೇಖಾನುದಾನಕ್ಕೆ ಸದನ ಒಪ್ಪಿಗೆ ನೀಡಿದೆ. 3,327 ಕೋಟಿ ರೂಪಾಯಿ ಪೂರಕ ಬಜೆಟ್‌ ಗೂ ಸದನ ಇಂದು ಧ್ವನಿಮತದ ಮೂಲಕ ಅಂಗೀಕಾರ ನೀಡಿತು. 
ಬಜೆಟ್ ಮೇಲೆ ಸಮಗ್ರ ಚರ್ಚೆಯಾಗಬೇಕು, ಹೀಗಾಗಿ ಮೂರು ತಿಂಗಳ ಲೇಖಾನುದಾನಕ್ಕೆ ಸರ್ಕಾರ ಒಪ್ಪಿಗೆ ಪಡೆಯಲು ತಕರಾರು ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದರು.  ನಂತರ ಮೂರು ತಿಂಗಳ ಲೇಖಾನುದಾನಕ್ಕೆ ಸದನ ಒಪ್ಪಿಗೆ ನೀಡಿತು. ಬಳಿಕ ಕಲಾಪವನ್ನು ಸಂಜೆ 5 ಗಂಟೆಗೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT