ಹಣಕಾಸು ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ 
ರಾಜಕೀಯ

ಹಣಕಾಸು ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ವಿಧಾನಸಭೆಯಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಬಹುಮತ ಸಾಬೀತಾದ ಕೂಡಲೇ ಧನವಿನಿಯೋಗ ವಿಧೇಯಕವೂ ಧ್ವನಿಮತದಿಂದ ಅಂಗೀಕಾರಗೊಂಡಿತು.

ಬೆಂಗಳೂರು: ವಿಧಾನಸಭೆಯಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಬಹುಮತ ಸಾಬೀತಾದ ಕೂಡಲೇ  ಧನವಿನಿಯೋಗ ವಿಧೇಯಕವೂ ಧ್ವನಿಮತದಿಂದ ಅಂಗೀಕಾರಗೊಂಡಿತು. 
ಹಿಂದಿನ ಮುಖ್ಯ ಮಂತ್ರಿ  ಎಚ್.ಡಿ. ಕುಮಾರಸ್ವಾಮಿ  ಅವರು ಮಂಡಿಸಿದ್ದ ಬಜೆಟ್ ಪ್ರಸ್ತಾವನೆಗೆ ಸದನ ಒಪ್ಪಿಗೆ ಕೊಡಬೇಕು ಎಂದು ಸಭಾ ನಾಯಕ  ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿದ ಮನವಿ ನಂತರ ಹಣಕಾಸು ವಿಧೇಯಕಕ್ಕೆ ಸದನ ಧ್ವನಿಮತದ ಅಂಗೀಕಾರ ನೀಡಿತು.
ಮೂರು ತಿಂಗಳ ಲೇಖಾನುದಾನಕ್ಕೆ ಸದನ ಒಪ್ಪಿಗೆ ನೀಡಿದೆ. 3,327 ಕೋಟಿ ರೂಪಾಯಿ ಪೂರಕ ಬಜೆಟ್‌ ಗೂ ಸದನ ಇಂದು ಧ್ವನಿಮತದ ಮೂಲಕ ಅಂಗೀಕಾರ ನೀಡಿತು. 
ಬಜೆಟ್ ಮೇಲೆ ಸಮಗ್ರ ಚರ್ಚೆಯಾಗಬೇಕು, ಹೀಗಾಗಿ ಮೂರು ತಿಂಗಳ ಲೇಖಾನುದಾನಕ್ಕೆ ಸರ್ಕಾರ ಒಪ್ಪಿಗೆ ಪಡೆಯಲು ತಕರಾರು ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದರು.  ನಂತರ ಮೂರು ತಿಂಗಳ ಲೇಖಾನುದಾನಕ್ಕೆ ಸದನ ಒಪ್ಪಿಗೆ ನೀಡಿತು. ಬಳಿಕ ಕಲಾಪವನ್ನು ಸಂಜೆ 5 ಗಂಟೆಗೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT