ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ 
ರಾಜಕೀಯ

ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಶಿರಸಿಯ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಶಿರಸಿಯ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಳೆ ನಡೆಯಲಿರುವ ಕರ್ನಾಟಕ ವಿಧಾನಸಭಾ ಸ್ಪೀಕರ್ ಹುದ್ದೆಯ ಚುನಾವಣೆಗೆ ಮಾಜಿ ಸಚಿವ ಹಾಗೂ ಹಾಲಿ ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ತನ್ನ ಅಭ್ಯರ್ಥಿಯೆಂದು ಆಡಳಿತಾರೂಢ ಬಿಜೆಪಿ ನಿರ್ಧರಿಸಿತ್ತು. ಅದರಂತೆ ಇಂದು ಕಾಗೇರಿ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಸೇರಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇನ್ನು ಈ ಹಿಂದೆ ಈ ಹುದ್ದೆಯನ್ನು ಆಲಂಕರಿಸಲು ಮಾಜಿ ಸ್ಪೀಕರ್ ಕೆ.ಜೆ. ಬೋಪಯ್ಯ ಆಸಕ್ತಿ ತೋರದ ಕಾರಣ, ಕಾಗೇರಿ ಅವರ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಆಖೈರು ಗೊಳಿಸಿದ್ದರು.  ವಿಧಾನಸಭೆಯ ಹಾಲಿ ಸ್ಪೀಕರ್  ಕೆ.ಆರ್. ರಮೇಶ್ ಕುಮಾರ್ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಕಾರಣ  ವಿಧಾನಸಭಾ ಸಭಾಧ್ಯಕ್ಷರ ಹುದ್ದೆ  ತೆರವಾಗಿತ್ತು. 
ಅಂತೆಯೇ ಪ್ರತಿಪಕ್ಷ ಕಾಂಗ್ರೆಸ್   ಸ್ಪೀಕರ್ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ  ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯ 208 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ  106 ಸದಸ್ಯರನ್ನು ಹೊಂದುವ ಮೂಲಕ  ಬಹುಮತ ಹೊಂದಿದೆ. ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪ ಸೋಮವಾರ ವಿಧಾನಸಭೆಯಲ್ಲಿ ತಮ್ಮ ಸರ್ಕಾರಕ್ಕಿರುವ ಬಹುಮತ ಸಾಬೀತು ಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT