ರಾಜಕೀಯ

ಮೈತ್ರಿ ಉಳಿಸಿಕೊಳ್ಳಲು ಹೆಚ್‍ಡಿಕೆ-ಸಿದ್ದು ರಣತಂತ್ರವೇನು; 2 ಪಕ್ಷೇತರರನ್ನು ತಮ್ಮ ಕಡೆ ಸೆಳೆದುಕೊಂಡರಾ?

Vishwanath S
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಂಗೆಟ್ಟಿದ್ದು ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ರಣತಂತ್ರ ಹೆಣೆದಿದ್ದು ಇಬ್ಬರು ಪಕ್ಷೇತರರಿಗೆ ಸಚಿವ ಸ್ಥಾನದ ಭರವಸೆಯನ್ನು ನೀಡಿದ್ದಾರೆ.
ಬಿಜೆಪಿ ಆಪರೇಷನ್ ಕಮಲಕ್ಕೆ ಪ್ರತಿತಂತ್ರ ಹೂಡಿರುವ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಹಾಗೂ ಪ್ರಮುಖ ನಿಗಮ ಮಂಡಳಿ ಸ್ಥಾನಗಳನ್ನು ನೀಡಲು ಮುಂದಾಗಿದ್ದಾರೆ. ಇನ್ನು ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಪಕ್ಷೇತರ ಶಾಸಕರಾದ ಶಂಕರ್ ಹಾಗೂ ಆರ್ ನಾಗೇಶ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿದ್ದು ಹಾಗೂ ಹೆಚ್‍ಡಿಕೆ ಚರ್ಚೆ ನಡೆಸಿದ್ದಾರೆ.
ಇನ್ನು ನೀವು ಬಿಜೆಪಿಗೆ ಹೋದರೆ ಮೈತ್ರಿ ಸರ್ಕಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಇಬ್ಬರನ್ನು ಕೈಬಿಡದೇ ಅವರಿಗೆ ಸೂಕ್ತವಾದ ಮಂತ್ರಿ ಸ್ಥಾನ ನೀಡಿ ಮನವೊಲಿಸಲು ಇಬ್ಬರು ನಾಯಕರು ಮುಂದಾಗಿದ್ದಾರೆ.
SCROLL FOR NEXT