ರಾಜಕೀಯ

ಮುಂದಿನ ತಿಂಗಳು ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಚಾಲನೆ

Sumana Upadhyaya
ಬೆಂಗಳೂರು: ಗ್ರಾಮ ವಾಸ್ತವ್ಯ ಮೂಲಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಿಂದೊಮ್ಮೆ ಸುದ್ದಿಯಾಗಿದ್ದರು. ಈ ಬಾರಿ ರಾಜ್ಯದಲ್ಲಿ ಮೈತ್ರಿ ಮೂಲಕ ಲೋಕಸಭಾ ಚುನಾವಣೆ ಎದುರಿಸಿದ್ದ ಕಾಂಗ್ರೆಸ್​​-ಜೆಡಿಎಸ್​ಗೆ ಹೀನಾಯ ಸೋಲುಂಟಾಗಿದ್ದು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಎಚ್​ಡಿ ಕುಮಾರಸ್ವಾಮಿ ಜನರಿಗೆ ಹತ್ತಿರವಾಗಲು ಇದೀಗ ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ.
ಸಿಎಂ ಕುಮಾರಸ್ವಾಮಿ ಮುಂದಿನ ತಿಂಗಳು ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಮಡಿಕೇರಿಯಲ್ಲಿ ಕಳೆದ ವರ್ಷ ಪ್ರವಾಹ ಮಳೆಯಿಂದ ಸಾಕಷ್ಟು ಹಾನಿ ಉಂಟಾಗಿತ್ತು. ನಿರಾಶ್ರಿತರಿಗೆ ಸರ್ಕಾರ ಸಹಾಯ ಒದಗಿಸಿತ್ತು. ಆದರೂ ಕೂಡ ಈ ಭಾಗದಲ್ಲಿ ಸಾಕಷ್ಟು ಕುಂದು ಕೊರತೆಗಳಿವೆ. ಇದನ್ನು ಹತ್ತಿರದಿಂದ ಆಲಿಸಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಹಾಗಾಗಿ ಮಡಿಕೇರಿಯಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲು ಚಿಂತನೆ ನಡೆಸಿದ್ದಾರೆ.
SCROLL FOR NEXT