ಸುರೇಶ್ ಅಂಗಡಿ 
ರಾಜಕೀಯ

ರಾಜ್ಯದಲ್ಲಿ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ- ಸುರೇಶ್ ಅಂಗಡಿ

ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವ ಕ್ಷೇತ್ರ ಬೆಳಗಾವಿಗೆ ಆಗಮಿಸಿದ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಂಡರು.

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವ ಕ್ಷೇತ್ರ  ಬೆಳಗಾವಿಗೆ ಆಗಮಿಸಿದ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಂಡರು.

ಬೆಳಗಾವಿ ನಗರಕ್ಕೆ ಆಗಮಿಸುವ ಮುನ್ನ ಸುರೇಶ್ ಅಂಗಡಿ ಹಾಗೂ ಅವರ ಪತ್ನಿ ಮಂಗಳಾ  ಸಾಂಬ್ರಾದಲ್ಲಿನ  ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅಂಗಡಿ, ರಾಜ್ಯದಲ್ಲಿ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಬೆಳಗಾವಿ ಜನರ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದು, ರೈಲ್ವೆ ಸಚಿವನಾಗಿ ಯೋಜನೆಗಳು ಹಾಗೂ ಸರಣಿ ಕೆಲಸಗಳ ಕಡೆ ಗಮನ ಹರಿಸಲಾಗುವುದು, ಅವುಗಳ ಮಹತ್ವ ಅರಿತು ಕೈಗೆತ್ತಿಕೊಳ್ಳಲಾಗುವುದು, ಈ ಭಾಗದಲ್ಲಿ ಬಾಕಿ ಉಳಿದಿರುವ ಯೋಜನೆಗಳ ಸಂಬಂಧ ಹುಬ್ಬಳ್ಳಿ ಹಾಗೂ ಬೆಂಗಳೂರಿನ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ.ಈ ಯೋಜನೆಗಳ ಅನುಷ್ಠಾನ ಸಂಬಂಧ ಕೂಡಲೇ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಅವರು ಹೇಳಿದರು.

ಸ್ಥಳೀಯ ಯಾತ್ರಾ ಸ್ಥಳ ಸವದತ್ತಿಗೆ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಕೇಂದ್ರ ಸರ್ಕಾರದೊಂದಿಗೆ ರಾಜ್ಯಸರ್ಕಾರ ನೆರವು ನೀಡಿದರೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!