ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಸಿಎಂ ಗ್ರಾಮ ವಾಸ್ಯವ್ಯ ಮತ್ತೊಂದು ಗಿಮಿಕ್: ಕುಮಾರಸ್ವಾಮಿಗೆ ಬಿಜೆಪಿ ಟಾಂಗ್

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಾರ್ಯ ವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮ ...

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಾರ್ಯ ವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಲು ಮುಂದಾಗಿದ್ದಾರೆ.
ಜೂನ್ 2ನೇ ವಾರದಿಂದ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. ಆದರೆ, ಈ ಕಾರ್ಯಕ್ರಮದಲ್ಲಿ ಅವರು ಕೆಲವೊಂದು ಬದಲಾವಣೆ ಮಾಡಿಕೊಳ್ಳಲಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ. ಜನತಾದರ್ಶನಕ್ಕೆ 4 ಸದಸ್ಯರ ತಂಡ ರಚನೆ ಮಾಡಿದ ಎಚ್.ಡಿ.ಕುಮಾರಸ್ವಾಮಿ ಗ್ರಾಮ ಪಂಚಾಯಿತಿ ಇಲ್ಲವೇ ಹೋಬಳಿ ಮಟ್ಟದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. 
ಒಂದು ತಿಂಗಳಿನಲ್ಲಿ ಕನಿಷ್ಠ ಎರಡು ಗ್ರಾಮಗಳಲ್ಲಿ ವಾಸ್ತವ್ಯ ಹೂಡಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಈ ಕುರಿತು ಅಂತಿಮ ಯೋಜನೆ ತಯಾರು ಮಾಡುತ್ತಿದೆ.
ಆದರೆ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿದೆ, ಇಉದೊಂದು ಗಿಮಿಕ್ ಎಂದು ಲೇವಡಿ ಮಾಡಿದೆ, ಸಮ್ಮಿಶ್ರ ಸರ್ಕಾರದಗ ವೈಫಲ್ಯಗಳನ್ನು ಮುಚ್ಚಿ ಹಾಕಲು ಕುಮಾರಸ್ವಾಮಿ ಅವರ ಮತ್ತೊಂದು ಡ್ರಾಮಾ ಎಂದು ವ್ಯಂಗ್ಯವಾಡಿದೆ, 
ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರಕಾರದ ಕಾರ್ಯವೈಖರಿ ತಿಳಿಯಲು ಗ್ರಾಮ ವಾಸ್ತವ್ಯ ನೆರವಾಗುತ್ತದೆ. ಶೀಘ್ರದಲ್ಲೇ ಗ್ರಾಮ ವಾಸ್ತವ್ಯ ಪ್ರಾರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. 
ಸರಕಾರಿ ಶಾಲೆಗಳಲ್ಲಿ ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ಮುಖ್ಯಮಂತ್ರಿಗಳು ಟ್ವೀಟ್‌ ಮಾಡಿದ್ದು, ಯಾವ ರೀತಿಯಲ್ಲಿ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. 
ಇನ್ನೂ ಸಿಎಂ ಕುಮಾರಸ್ವಾಮಿ ನಡೆಯನ್ನು ಸ್ವಾಗತಿಸಿರುವ ನೆಟ್ಟಿಗರು ಉತ್ತರ ಕರ್ನಾಟಕದಿಂದ ಆರಂಭಿಸುವಂತೆ ಮನವಿ ಮಾಡಿದ್ದಾರೆ. 2006ರ ಕುಮಾರಸ್ವಾಮಿ ಆಡಳಿತ ಮರುಕಳಿಸಲಿ ಎಂದು ಕೆಲವು ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT