ಸಂಗ್ರಹ ಚಿತ್ರ 
ರಾಜಕೀಯ

ಲೋಕಸಭೆ ಚುನಾವಣೆ ಸೋಲು ಹಿನ್ನಲೆ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ

ಲೋಕಸಭಾ ಚುನಾವಣೆ 2019ರ ಹೀನಾಯ ಸೋಲಿನ ಬಳಿಕ ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆ 2019ರ ಹೀನಾಯ ಸೋಲಿನ ಬಳಿಕ ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್ ಅವರು, ಲೋಕಸಭಾ ಚುನವಾಣೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಉತ್ತಮ ಪ್ರದರ್ಶನ ತೋರಲು ಜೆಡಿಎಸ್ ಪಕ್ಷ ವಿಫಲವಾದ ಹಿನ್ನೆಲೆಯಲ್ಲಿ, ಅದರ ನೈತಿಕ ಹೊಣೆಹೊತ್ತು ತಾವು ಈ ಹುದ್ದೆಯನ್ನು ತೊರೆಯುತ್ತಿರುವುದಾಗಿ ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್ ಅವರು, 'ತುಮಕೂರಿನಲ್ಲಿ ವ್ಯವಸ್ಥಿತವಾಗಿ ಖೆಡ್ಡಾ ತೋಡಿ ದೇವೇಗೌಡರನ್ನು ಸೋಲಿಸಲಾಯಿತು. ಜೋಡೆತ್ತಿನಂತೆ ಇರಬೇಕಾದ ಮೈತ್ರಿ ಪಕ್ಷಗಳು ಆ ರೀತಿ ಇರಲೇ ಇಲ್ಲ. ದೇವೇಗೌಡರನ್ನು ಮೈಸೂರಿನಿಂದ ಸ್ಪರ್ಧಿಸುವಂತೆ ಕೋರಿದರು. ಅದು ಕಾಂಗ್ರೆಸ್​ ಷಡ್ಯಂತ್ರದಿಂದ ಸಾಧ್ಯವಾಗಲಿಲ್ಲ. ಮಂಡ್ಯದಲ್ಲೂ ಕಾಂಗ್ರೆಸ್ ನ ನಾಯಕರ ಕೊಂಕು ಮಾತುಗಳಿಂದ ಅಹಿಂದ ಮತಗಳು ಚದುರಿಹೋಗಿ, ಜೆಡಿಎಸ್ ​ಗೆ ಸೋಲು ಉಂಟು ಮಾಡಿತು. ಸಮನ್ವಯ ಸಮಿತಿ ಕೇವಲ ನಾಮಾಕಾವಸ್ಥೆಯಂತೆ ಇತ್ತು. ಇದು ಸಿದ್ದರಾಮಯ್ಯ ಅವರ ಕೈಗೊಂಬೆಯಾಗಿತ್ತೆ ಹೊರತು ಎರಡು ಪಕ್ಷಗಳ ಸಮನ್ವಯ ಸಾಧಿಸುವ ಕೆಲಸವನ್ನು ಮಾಡಲಿಲ್ಲ, ಇಲ್ಲಿ ನನಗಾಗಲಿ ಮತ್ತು ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ನೀಡಲಿಲ್ಲ. ಈ ಎಲ್ಲ ಕಾರಣಗಳಿಂದ ನಾನು ಬೇಸತ್ತು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT