ಡಿವಿ ಸದಾನಂದಗೌಡ 
ರಾಜಕೀಯ

ಮೇಕೆದಾಟು, ಉಪನಗರ ರೈಲು ಯೋಜನೆ ಬಗ್ಗೆ ಮಾಹಿತಿ ಇರಲಿಲ್ಲ: ಸದಾನಂದಗೌಡ ಯೂ-ಟರ್ನ್

ಬೆಂಗಳೂರು ಉಪ ನಗರ ರೈಲು ಯೋಜನೆ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ...

ಬೆಂಗಳೂರು: ಬೆಂಗಳೂರು ಉಪ ನಗರ ರೈಲು ಯೋಜನೆ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ(ಡಿಪಿಆರ್) ಕಾರ್ಯಸಾಧ್ಯತಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಮಾಹಿತಿ ತಮಗೆ ಇರಲಿಲ್ಲ ಎನ್ನುವ ಮೂಲಕ ಕೇಂದ್ರ ಸಚಿವ ಸದಾನಂದಗೌಡ ಯೂಟರ್ನ್ ಹೊಡೆದಿದ್ದಾರೆ.
ಸೋಮವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ವೇಳೆ ರಾಜ್ಯ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಮೇಕೆದಾಟು ಹಾಗೂ ಉಪನಗರ ರೈಲ್ವೆ ಯೋಜನಾ ವರದಿಗಳನ್ನು ಸಲ್ಲಿಸಿಲ್ಲವೆಂದು ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದರು.
ಕೇಂದ್ರ ಸಚಿವರ ಆರೋಪಕ್ಕೆ ಸಂಜೆ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹಾಗೂ ಇಂದು ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ. ಮೇಕೆದಾಟು ಯೋಜನೆ ಡಿಪಿಆರ್ ಸಲ್ಲಿಸಿ 5 ತಿಂಗಳಾಗಿದೆ. ಅಂತೆಯೇ ಕಾರ್ಯಸಾಧ್ಯತಾ ವರದಿ ಸಲ್ಲಿಸಿ ಒಂದು ತಿಂಗಳು ಕಳೆದಿದೆ ಸಚಿವರಿಗೆ ಮಾಹಿತಿ ಇಲ್ಲದಿದ್ದಲ್ಲಿ ಅವರ ಸಮಾಯಾವಕಾಶ ಪಡೆದು ಭೇಟಿ ಮಾಡಿ ಮಾಹಿತಿ ನೀಡುತ್ತೇನೆ ಎಂದು ಸಚಿವ ಡಿಕೆ ಶಿವಕುಮಾರ್ ನೇರವಾಗಿಯೇ ತಿರುಗೇಟು ನೀಡಿದ್ದರು.
ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾಜಿಕ ಜಾಲ ತಾಣದಲ್ಲಿ ಟ್ವೀಟ್ ಮಾಡುವ ಮೂಲಕ ರಾಜಕಾರಣ ಮಾಡುವುದನ್ನು ಬಿಡಿ. ಮೇಕೆದಾಟು ಹಾಗೂ ಉಪನಗರ ರೈಲು ಯೋಜನೆಗೆ ಎಲ್ಲಾ ವಿವರ ಸಲ್ಲಿಸಿದ್ದೇವೆ. ಉಪನಗರ ರೈಲು ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸ್ಪಷ್ಟ ಮಾತುಗಳಲ್ಲಿ ಸದಾನಂದಗೌಡರ ಆರೋಪಗಳನ್ನು ತಳ್ಳಿ ಹಾಕಿದ್ದರು.
ಸದಾಶಿವನಗರದ ರಾಷ್ಟ್ರೋತ್ಥಾನ ಪರಿಷತ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ರಾಜ್ಯ ಸರ್ಕಾರದಿಂದ ಉಪ ನಗರ ರೈಲು ಯೋಜನೆ ಹಾಗೂ ಮೇಕೆದಾಟು ಯೋಜನೆಗೆ ವಿಸ್ತೃತ ವರದಿ ಸಲ್ಲಿಕೆ ಮಾಡಿದ್ದರೆ ಅದನ್ನು ಸ್ವಾಗತಿಸುತ್ತೇನೆ. ರಾಜ್ಯ ಸರ್ಕಾರ ಕೇಂದ್ರದ ಇಲಾಖೆಗೆ ವರದಿ ಸಲ್ಲಿಸಿರುವ ಮಾಹಿತಿ ತಮ್ಮ ಗಮನಕ್ಕೆ ಬಂದಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮಾಹಿತಿ ಪಡೆಯುತ್ತೇನೆ ಎಂದು ಮುಜುಗರ ತಪ್ಪಿಸಿಕೊಳ್ಳಲು ಯತ್ನಿಸಿದರು.
ವರದಿ ಸಲ್ಲಿಸಿರುವ ಬಗ್ಗೆ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಮ್ಮ ನಿನ್ನೆಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ನಡೆಸಿದರು. ರಾಜಕಾರಣಕ್ಕೋಸ್ಕರ ನಾನು ಹೀಗೆ ಮಾತನಾಡಿಲ್ಲ ಎಂದು ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT