ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ದಲಿತ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಹರಿಹಾಯ್ದಿದ್ದಾರೆ.
ಸಂವಿಧಾನ ಕತೃ ಡಾ ಬಿ ಆರ್ ಅಂಬೇಡ್ಕರ್ ಹೆಸರಿನಲ್ಲಿ ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಎಂದರೆ ವಾಸ್ತವವಾಗಿ ದಲಿತರ ಉದ್ದಾರವಾಗುವುದಿಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮೀಸಲು ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ ಎಂದು ಸಿದ್ದರಾಮಯ್ಯ ತಮ್ಮ ಅಸಮಾಧಾನ, ಆಕ್ರೋಶ ಹೊರಹಾಕಿದ್ದಾರೆ.