ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ 
ರಾಜಕೀಯ

ಮೈತ್ರಿ ಸರ್ಕಾರ ಉಳಿಸಲು ಬದ್ಧ, ರಾಜಿನಾಮೆ ಕೊಡಲು ಸಿದ್ಧ: ಜೆಡಿಎಸ್ ಸಚಿವರು

ಸಮ್ಮಿಶ್ರ ಸರ್ಕಾರವನ್ನು ಉಳಿಸಲು ನಾವು ರಾಜೀನಾಮೆ ನೀಡಲು ಸಿದ್ಧವಾಗಿದ್ದೇವೆ ಎಂದು ಜೆಡಿಎಸ್ ಸಚಿವರು ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿಗೆ ...

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು  ಉಳಿಸಲು  ನಾವು ರಾಜೀನಾಮೆ ನೀಡಲು ಸಿದ್ಧವಾಗಿದ್ದೇವೆ ಎಂದು ಜೆಡಿಎಸ್ ಸಚಿವರು ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿಗೆ ಭರವಸೆ ನೀಡಿದ್ದಾರೆ.
ಮಂಗಳವಾರ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಎಲ್ಲಾ ಸಚಿವರು ಸರ್ಕಾರದ ಉಳಿವಿಗಾಗಿ ತಮ್ಮ ತೀರ್ಮಾನ ಪ್ರಕಟಿಸಿದ್ದಾರೆ, ಅಲ್ಲದೇ 37 ಶಾಸಕರೂ ಒಗ್ಗಟ್ಟಾಗಿ ನಿಂತು ಸರ್ಕಾರವನ್ನು ಉಳಿಸಿಕೊಳ್ಳುವುದರ ಜೊತೆಗೆ ಪಕ್ಷವನ್ನು ಸದೃಢವಾಗಿ ಕಟ್ಟುವುದಕ್ಕೆ ಪಣ ತೊಟ್ಟಿದ್ದಾರೆ.
ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಜೊತೆ ಪರಸ್ಪರ ವಿಶ್ವಾಸದಿಂದ ನಡೆದುಕೊಳ್ಳಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ, ಇನ್ನೂ ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜಿನಾಮೆಯನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ವಿಶ್ವನಾಥ್ ಅವರಲ್ಲಿ ಹಲವು ಶಾಸಕರು ಮನವಿ ಮಾಡಿದರು, ಈಗಾಗಲೇ ಪರಿಸ್ಥಿತಿ ಕೆಟ್ಟದಾಗಿದೆ. ಇದರಿಂದ ಮತ್ತಷ್ಟು ಹದಗೆಡಲಿದೆ ಎಂದು ಹೇಳಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ,ಸಿಎಂ ಕುಮಾರಸ್ವಾಮಿ, ಸಚಿವ ಎಚ್.ಡಿ ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಸಿ,ಎಸ್ ಪುಟ್ಟರಾಜು, ಮುಂತಾದವರು ಹಾಜರಿದ್ದರು,ಬಸವರಾಜ ಹೊರಟ್ಟಿ ಗೈರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT