ಸುಮಲತಾ ಅಂಬರೀಶ್ 
ರಾಜಕೀಯ

ಜೆಡಿಎಸ್ ಜತೆ ಮೈತ್ರಿಯೇ ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ: ಸುಮಲತಾ ಅಂಬರೀಶ್

ರಾಜ್ಯದಲ್ಲಿ ಜಾತ್ಯಾತೀತ ಜನತಾದಳದೊಡನೆ ಮೈತ್ರಿ ಮಾಡಿಕೊಂಡದ್ದೇ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಜಾತ್ಯಾತೀತ ಜನತಾದಳದೊಡನೆ ಮೈತ್ರಿ ಮಾಡಿಕೊಂಡದ್ದೇ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
"ರಾಜ್ಯದಲ್ಲಿ ಕಾಂಗ್ರೆಸ್ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಲೋಕಸಭೆ ಚುನಾವಣೆ ಎದುರಿಸಿದ್ದರೆ ಕನಿಷ್ಟ ಹತ್ತು ಸ್ಥಾನಗಳನ್ನು ಗಳಿಸುತ್ತಿತ್ತು ಎಂದು ಸುಮಲತಾ ಅಭಿಪ್ರಾಯಪಟ್ಟರು.
"ಜನರು ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಒಪ್ಪಿಕೊಂಡಿಲ್ಲ, ಆ ಕುರಿತಂತೆ ನಾನು ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದ್ದೆ, ಆದರೆ ಅವರು ನನ್ನ ಮಾತಿನ ಕುರಿತು ಕಾಳಜಿ ತೋರಲಿಲ್ಲ.ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ತಾನು ಗೆಲ್ಲಬಹುದಾಗಿದ್ದ ಸ್ಥಾನವನ್ನೂ ಬಿಟ್ಟುಕೊಟ್ಟಿತು. ಇದುವೇ ಬಿಜೆಪಿ ಗೆಲ್ಲಲು ಸುಲಭ ದಾರಿಯಾಗಿತ್ತು" ಅವರು ವಿವರಿಸಿದರು,
"ಕಾಂಗ್ರೆಸ್ ನಲ್ಲಿ ಉತ್ತಮ ಅಭ್ಯರ್ಥಿಗಳಿದ್ದರೂ ಸಹ ಮೈತ್ರಿಯ ಕಾರಣ ಅವರು ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಹಾಗ್ಗಿ ಕಾಂಗ್ರೆಸ್ ಸೋಲೊಪ್ಪಬೇಕಾಯಿತು " ಸುಮಲತಾ ಹೇಳಿದ್ದಾರೆ.
ಕಳೆದ ತಿಂಗಳು ನಡೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಲಕ್ಷಕ್ಕೆ ಹೆಚ್ಚು ಮತಗಳ ಅಂತರದಲ್ಲಿ ವಿಜಯ ಸಾಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT