ಸಿದ್ದರಾಮಯ್ಯ 
ರಾಜಕೀಯ

ಬಡವರ, ದಲಿತರ ಪರ ಧ್ವನಿ ಎತ್ತಿದ್ದಕ್ಕೆ ನನ್ನನ್ನು ಟಾರ್ಗೆಟ್-ಸಿದ್ದರಾಮಯ್ಯ

ಬಡವರು, ದೀನ ದಲಿತರ ಪರ ನಾನು ಧ್ವನಿ ಎತ್ತುತ್ತೇನೆ, ಧ್ವನಿ ಎತ್ತುವುದಕ್ಕಾಗಿ ತಮ್ಮನ್ನು ಟಾರ್ಗೆಟ್ ...

ಬೆಂಗಳೂರು: ಬಡವರು, ದೀನ ದಲಿತರ ಪರ ನಾನು ಧ್ವನಿ ಎತ್ತುತ್ತೇನೆ, ಧ್ವನಿ ಎತ್ತುವುದಕ್ಕಾಗಿ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 
ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸರ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಬಡವರು, ಶೋಷಿತರ ಪರ ಕೆಲಸ ಮಾಡಿದರೆ ಕಷ್ಟ. ಅಂತವರನ್ನು ವರ್ತಮಾನ ಕ್ರೂರವಾಗಿ ನೋಡಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ನೆನಪಿಟ್ಟುಕೊಳ್ಳುತ್ತದೆ. ಅದೊಂದು ಸಾರ್ವಕಾಲಿಕ ಸತ್ಯ ಎನ್ನುವುದು ತಮ್ಮ ಅನುಭವಕ್ಕೆ ಬರುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಬಡವರು, ಹಿಂದುಳಿದವರು, ದಲಿತರ ಪರ ಧ್ವನಿ ಎತ್ತುತ್ತಾನೆ ಎಂಬ ಕಾರಣಕ್ಕಾಗಿ ತಮ್ಮನ್ನು ರಾಜಕೀಯ ಪಕ್ಷಗಳ ವಿರೋಧಿಗಳು ಹಾಗೂ ಸ್ವಪಕ್ಷೀಯರು ಗುರಿ ಮಾಡಿದ್ದಾರೆ. ಡಿ ದೇವರಾಜ ಅರಸು ಅವರ ಜನಪರ ಕೆಲಸಗಳು ಅವರನ್ನು ಕೈ ಹಿಡಿದವು. ಆದರೆ ನಮ್ಮನ್ನು ಜನರು ಕೈಬಿಟ್ಟರು ಎಂಬ ಅರ್ಥದಲ್ಲಿ ಹಾಗೂ ಸ್ವಪಕ್ಷೀಯರ ಟೀಕೆ ಹಾಗೂ ವಿರೋಧ ಕಟ್ಟಿಕೊಳ್ಳುವಂತಾಗಿದೆ ಎಂದು ಸಾಂದರ್ಭಿಕವಾಗಿ, ಸೂಚ್ಯವಾಗಿ ಸಿದ್ದರಾಮಯ್ಯ ತಮಗಾಗುತ್ತಿರುವ ನೋವನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT