ರಾಜಕೀಯ

ಮಂತ್ರಿ ಸ್ಥಾನ ಮಾರಾಟ ಮಾಡಲಾಗಿದೆ ಎಂಬ ಆರೋಪಕ್ಕೆ ದಿನೇಶ್ ಗುಂಡೂರಾವ್ ಹೇಳಿದ್ದೇನು?

Shilpa D
ಬೆಂಗಳೂರು: ಮಂತ್ರಿ ಸ್ಥಾನ ಮಾರಾಟ ಮಾಡಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ, ಶಾಸಕ ರೋಷನ್ ಬೇಗ್ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ, ಹೀಗಾಗಿ ಅವರ ಹೇಳಿಕೆ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 
ಪಕ್ಷದ ಹಿರಿಯ ನಾಯಕರನ್ನು  ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಾರನ್ನೂ ಕಡೆಗಣಿಸಿಲ್ಲ, ಪಕ್ಷ ಯಾರೊಬ್ಬರ ಆಸ್ತಿಯೂ ಇಲ್ಲ, ಟಿಕೆಟ್ ನೀಡುವಾಗಲೂ ಎಲ್ಲರ ಅಭಿಪ್ರಾಯ ಕೇಳಿದ್ದೇವೆ, ಅವರನ್ನು ಕೇಳಿಯೆ ಟಿಕೆಟ್ ನೀಡಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ
ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಅಭಿಪ್ರಾಯ ಪಡೆದೇ ಚುನಾವಣೆಗೆ ಟಿಕೆಟ್ ನೀಡಲಾಗಿದೆ, ಹಿರಿಯ ಶಾಸಕ ರಾಮಲಿಂಗಾರೆಡ್ಡಿ ನಮ್ಮ ಸಂಯೋಜಕ ಸಮಿತಿಯ ಅಧ್ಯಕ್ಷರು, ಅವರಿಗೆ ಅವಕಾಶ ಖಂಡಿತ ಸಿಗಲಿದೆ ಎಂದು ಹೇಳಿದರು
ರೋಷನ್ ಬೇಗ್ ಎಐಸಿಸಿ ಸದಸ್ಯರೂ ಆಗಿದ್ದಾರೆ. ಹೀಗಾಗಿ ಈ ಸಂಬಂಧ ಹೈಕಮಾಂಡ್ ಗೆ ಸಂಪೂರ್ಣ ವರದಿ ಕಳುಹಿಸಲಾಗುವುದು ಎಂದು ಹೇಳಿದರು.
SCROLL FOR NEXT