ಪ್ರಹ್ಲಾದ್ ಜೋಶಿ 
ರಾಜಕೀಯ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 38 ಮಸೂದೆಗಳ ಮಂಡನೆ: ಪ್ರಹ್ಲಾದ್ ಜೋಷಿ

ಇದೇ 17 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ 38ಕ್ಕೂ ಹೆಚ್ಚು ಮಸೂದೆಗಳನ್ನು ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ: ಇದೇ 17 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ 38ಕ್ಕೂ ಹೆಚ್ಚು ಮಸೂದೆಗಳನ್ನು ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ವಿಸ್ತರಣೆ , ತ್ರಿವಳಿ ತಲಾಕ್ ಇತರೆ ಶಾಸಕಾಂಗ ಸಂಬಂಧಿತ ವಿಷಯಗಳ ಮಸೂದೆಗಳು ಇದರಲ್ಲಿ ಅಡಕವಾಗಿರಲಿವೆ ಎಂದು ಅವರು ಹೇಳಿದರು.
ಎಲ್ಲಾ ಮಸೂದೆಗಳ ಅಂಗೀಕಾರಕ್ಕೆ ವಿರೋಧ ಪಕ್ಷಗಳ ಸಹಕಾರ ಬಯಸುವುದಾಗಿ ಅವರು ಹೇಳಿದರು.
ಈಗಾಗಲೇ ಯುಪಿಎ ಅಧ್ಯಕ್ಷೆ ಸೋನಿಯಗಾಂಧಿ ಸೇರಿದಂತೆ ಅನೇಕ ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಸಂಸತ್ ಸುಗಮ ಕಲಾಪಕ್ಕೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.
ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ 3600 ಎಕರೆ ಭೂಮಿ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರ್ಧ ಬೆಲೆಗೆ ಭೂಮಿ ಮಾರಾಟ ಮಾಡುತ್ತಿರುವುದನ್ನು ನೋಡಿದರೆ ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದ್ದಾರೆ.
ಅಧಿಕಾರ ಹಿಡಿದಿರುವ ಎರಡೂ ಕಾಂಗ್ರೆಸ್ - ಜೆಡಿಎಸ್ ಪಕ್ಷಗಳು ಕಚ್ಚಾಡುತ್ತಿರುವುದನ್ನು ನೋಡಿದರೆ ಇಲ್ಲಿ ಯಾವುದೇ ಸರ್ಕಾರ ಇಲ್ಲ ಎಂಬ ಭಾವನೆ ಮೂಡುತ್ತಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT