ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಬಿ.ಎಸ್.ವೈ ಮೂರು ದಿನಗಳ ಬರ ಪರಾಮರ್ಶೆ ಪ್ರವಾಸ ಮುಕ್ತಾಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮೂರು ದಿನಗಳ ಬರ ಪರಾಮರ್ಶೆ ಪ್ರವಾಸ ಮುಕ್ತಾಯಗೊಂಡಿದೆ. ಬಾದಾಮಿ, ಹುನಗುಂದ, ಕೊಪ್ಪಳ, ಗಂಗಾವತಿ, ಲಿಂಗಸಗೂರು, ಯಾದಗಿರಿ ಮತ್ತು ಗುರುಮಿಠಕಲ್ ನಲ್ಲಿ ಪರಾಮರ್ಶೆ ನಡೆಸಿದ ಯಡಿಯೂರಪ್ಪ, ಸರ್ಕಾರಕ್ಕೆ ವರದಿ ಸಲ್ಲಿಸಲು ಚಿಂತಿಸಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮೂರು ದಿನಗಳ ಬರ ಪರಾಮರ್ಶೆ ಪ್ರವಾಸ ಮುಕ್ತಾಯಗೊಂಡಿದೆ. ಬಾದಾಮಿ, ಹುನಗುಂದ, ಕೊಪ್ಪಳ, ಗಂಗಾವತಿ, ಲಿಂಗಸಗೂರು, ಯಾದಗಿರಿ ಮತ್ತು ಗುರುಮಿಠಕಲ್ ನಲ್ಲಿ ಪರಾಮರ್ಶೆ ನಡೆಸಿದ ಯಡಿಯೂರಪ್ಪ, ಸರ್ಕಾರಕ್ಕೆ ವರದಿ ಸಲ್ಲಿಸಲು ಚಿಂತಿಸಿದ್ದಾರೆ. 
ಬರಗಾಲದ ಅವಲೋಕನದ ಅಂತಿಮ ದಿನದಂದು, ಯಡಿಯೂರಪ್ಪ , ಕಿಕ್  ಬ್ಯಾಕ್ ಪಡೆದು ಜೆಎಸ್ ಡಬ್ಲ್ಯೂಗೆ ಭೂಮಿ  ಮಾರಾಟ ಮಾಡಲಾಗಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 
ಜೆಎಸ್ ಡಬ್ಲ್ಯೂಗೆ ಭೂಮಿ ಮಾರಾಟ ವಿರುದ್ಧ   ಬಿಜೆಪಿ ಕರೆ ನೀಡಿದ್ದ ಮೂರು ದಿನಗಳ ಪ್ರತಿಭಟನೆ ಮುಂದೂಡಲಾಗಿದೆ. ಜೂನ್ 13ರಿಂದ ಪ್ರತಿಭಟನೆ ಆರಂಭಿಸುವುದಾಗಿ ಹೇಳಲಾಗಿತ್ತು. ಆದರೆ, ಅಂದು ಅಮಿತ್  ಶಾ ಅವರೊಂದಿಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಯಡಿಯೂರಪ್ಪ ಪಾಲ್ಗೊಳ್ಳುತ್ತಿರುವುದರಿಂದ ಇದನ್ನು ಮುಂದೂಡಲಾಗಿದೆ. 
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ  ಸಭೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಳ್ಳುತ್ತಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಮಿತ್ ಶಾ ಅಭಿನಂದಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT