ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಬಿ.ಎಸ್.ವೈ ಮೂರು ದಿನಗಳ ಬರ ಪರಾಮರ್ಶೆ ಪ್ರವಾಸ ಮುಕ್ತಾಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮೂರು ದಿನಗಳ ಬರ ಪರಾಮರ್ಶೆ ಪ್ರವಾಸ ಮುಕ್ತಾಯಗೊಂಡಿದೆ. ಬಾದಾಮಿ, ಹುನಗುಂದ, ಕೊಪ್ಪಳ, ಗಂಗಾವತಿ, ಲಿಂಗಸಗೂರು, ಯಾದಗಿರಿ ಮತ್ತು ಗುರುಮಿಠಕಲ್ ನಲ್ಲಿ ಪರಾಮರ್ಶೆ ನಡೆಸಿದ ಯಡಿಯೂರಪ್ಪ, ಸರ್ಕಾರಕ್ಕೆ ವರದಿ ಸಲ್ಲಿಸಲು ಚಿಂತಿಸಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮೂರು ದಿನಗಳ ಬರ ಪರಾಮರ್ಶೆ ಪ್ರವಾಸ ಮುಕ್ತಾಯಗೊಂಡಿದೆ. ಬಾದಾಮಿ, ಹುನಗುಂದ, ಕೊಪ್ಪಳ, ಗಂಗಾವತಿ, ಲಿಂಗಸಗೂರು, ಯಾದಗಿರಿ ಮತ್ತು ಗುರುಮಿಠಕಲ್ ನಲ್ಲಿ ಪರಾಮರ್ಶೆ ನಡೆಸಿದ ಯಡಿಯೂರಪ್ಪ, ಸರ್ಕಾರಕ್ಕೆ ವರದಿ ಸಲ್ಲಿಸಲು ಚಿಂತಿಸಿದ್ದಾರೆ. 
ಬರಗಾಲದ ಅವಲೋಕನದ ಅಂತಿಮ ದಿನದಂದು, ಯಡಿಯೂರಪ್ಪ , ಕಿಕ್  ಬ್ಯಾಕ್ ಪಡೆದು ಜೆಎಸ್ ಡಬ್ಲ್ಯೂಗೆ ಭೂಮಿ  ಮಾರಾಟ ಮಾಡಲಾಗಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 
ಜೆಎಸ್ ಡಬ್ಲ್ಯೂಗೆ ಭೂಮಿ ಮಾರಾಟ ವಿರುದ್ಧ   ಬಿಜೆಪಿ ಕರೆ ನೀಡಿದ್ದ ಮೂರು ದಿನಗಳ ಪ್ರತಿಭಟನೆ ಮುಂದೂಡಲಾಗಿದೆ. ಜೂನ್ 13ರಿಂದ ಪ್ರತಿಭಟನೆ ಆರಂಭಿಸುವುದಾಗಿ ಹೇಳಲಾಗಿತ್ತು. ಆದರೆ, ಅಂದು ಅಮಿತ್  ಶಾ ಅವರೊಂದಿಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಯಡಿಯೂರಪ್ಪ ಪಾಲ್ಗೊಳ್ಳುತ್ತಿರುವುದರಿಂದ ಇದನ್ನು ಮುಂದೂಡಲಾಗಿದೆ. 
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ  ಸಭೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಳ್ಳುತ್ತಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಮಿತ್ ಶಾ ಅಭಿನಂದಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT