ಜಿ.ಎಸ್ ಬಸವರಾಜು 
ರಾಜಕೀಯ

ಅಧಿಕಾರ ಇರಲಿ, ಇಲ್ಲದಿರಲಿ ತುಮಕೂರು ಸಂಸದ ಜಿ.ಎಸ್. ಬಸವರಾಜುಗೆ 'ಕಾಯಕವೇ ಕೈಲಾಸ'!

ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಸೋಲಿಸಿದ್ದಾರೆ, ಬಸವರಾಜು .,..

ತುಮಕೂರು: ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಸೋಲಿಸಿದ್ದಾರೆ, ಬಸವರಾಜು ಅವರ ಗೆಲುವಿಗೆ ಕಾಂಗ್ರೆಸ್ ಬಂಡಾಯ ನಾಯಕರು ಸಹಾಯ ಮಾಡಿದ್ದಾರೆ.
2024ರ ವೇಳೆಗೆ ಎಲ್ಲಾ ರೀತಿಯಲ್ಲೂ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದ್ದಾರೆ,. ಅಧಿಕಾರದಲ್ಲಿ ಇರದಿದ್ದಾಗಲೂ ಬಸವರಾಜು ಕೆಲಸಗಳ ಮೂಲಕ ಪ್ರಸಿದ್ಧರಾಗಿದ್ದಾರೆ,  ಈಗಾಗಲೇ ಕೆಲಸ ಆರಂಭಿಸಿದ್ದಾರೆ, ಪ್ರತಿದಿನ ಸುಮಾರು ನೂರಾರು ಮಂದಿ  ಬಸವರಾಜು ಅವರ ಮನೆ ಮತ್ತು ಕಚೇರಿಗೆ ತಮ್ಮ ಕೆಲಸ ಮಾಡಿಸಿಕೊಳ್ಳಲು ಬರುತ್ತಿದ್ದಾರೆ.ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಪತ್ರಗಳನ್ನು ತೆಗೆದುಕೊಂಡು ಹೋಗುತ್ತಾರೆ. ಜೊತೆಗೆ ಬಸವರಾಜು ಅವರ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಕೊಡಿಸುವಂತೆ ಇಲ್ಲವೇ ಕೆಲಸ ಕೊಡಿಸುವಂತೆ ಮನವಿ ಸಲ್ಲಿಸುತ್ತಾರೆ.
ಹಾಸನ ಜಿಲ್ಲೆಯ ಗೊರೂರು ಜಲಾಶಯದಿಂದ ಹೇಮಾವತಿ ನದಿಯ ಮೂಲಕ 24.4 ಟಿಎಂಸಿ ನೀರನ್ನು ತುಮಕೂರಿಗೆ ತರುವುದೇ ಮೊದಲ ಆದ್ಯತೆ, ಈ ಸಂಬಂಧ ಈಗಾಗಲೇ  ಎಂಜಿನೀಯರ್ ಗಳ ಜೊತೆ ಚರ್ಚಿಸಿದ್ದು, ಜೊತೆಗೆ ಶೀಘ್ರವೇ ಕಾಲುವೆ ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ತಿಳಿಸಿದ್ದಾರೆ,
ಜೊತೆಗೆ ತುಮಕೂರು ನಗರವನ್ನು ಹಸಿರುನಗರ ವನ್ನಾಗಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ, ತಮ್ಮ ಕ್ಷೇತ್ರದಲ್ಲಿ ಎಚ್ ಎ ಎಲ್ ಚಾಪರ್ ಯೂನಿಟ್ ಮತ್ತು ಇಸ್ರೋ ತರುವ ಕಾರ್ಯ ಪ್ರಗತಿಯಲ್ಲಿದೆ,
ತಮ್ಮ ದೇಹದಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ ಎಂದು ಹೇಳಿದ್ದ ಬಸವರಾಜು 2008 ರಲ್ಲಿ ಯಡಿಯೂರಪ್ಪ ನಿಕಟವರ್ತಿಯಾಗಿದ್ದರು, 2009ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿ ಗೆದ್ದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT