ಪಕ್ಷೇತರ ಶಾಸಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯಪಾಲ ವಜೂಬಾಯಿ ವಾಲಾ 
ರಾಜಕೀಯ

ಕುಮಾರಸ್ವಾಮಿ ಸಂಪುಟಕ್ಕೆ ಶಂಕರ್, ನಾಗೇಶ್ ಸೇರ್ಪಡೆ: ಕೊನೆಕ್ಷಣದಲ್ಲಿ ಫಾರೂಖ್ ಕೈಬಿಟ್ಟ ಜೆಡಿಎಸ್!

ಇಬ್ಬರು ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು...

ಬೆಂಗಳೂರು: ಇಬ್ಬರು  ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್  ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಸಂಪುಟದ ಹಲವು ಸಚಿವರು, ಶಾಸಕರು ಸಮಾರಂಭದಲ್ಲಿ ಹಾಜರಿದ್ದರು. ನೂತನ ಸಚಿವರಿಗೆ ರಾಜ್ಯಪಾಲರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಬ್ಬರೂ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.
ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಆರ್ ಶಂಕರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ ತಮ್ಮ ಕರ್ನಾಟಕ ಪ್ರಜ್ಞಾವಂತ  ಜನತಾ ಪಾರ್ಟಿಯನ್ನು (ಕೆಪಿಜೆಪಿ) ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಳಿಸುವ ಪತ್ರ ನೀಡಿದರು. ಸಿದ್ದರಾಮಯ್ಯ ಅವರು ಶಂಕರ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. 
ಜೆಡಿಎಸ್ ಕೋಟಾದ ಮತ್ತೊಂದು ಖಾತೆಯನ್ನು ಬಿಎಂ ಫಾರೂಖ್ ಅವರಿಗೆ  ನೀಡಲಾಗುತ್ತದೆ ಎಂದು ಹೇಳಲಾಗಿತ್ತು, ಆದರೆ ಅಂತಿಮ ಕ್ಷಣದ ಬದಲಾವಣೆಯಿಂದಾಗಿ ಫಾರೂಖ್ ಅವರ ಹೆಸರನ್ನು ಕೈ ಬಿಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ