ಆನಂದ್ ಸಿಂಗ್ ಮತ್ತು ಅನಿಲ್ ಲಾಡ್ 
ರಾಜಕೀಯ

ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ: ಸರ್ಕಾರದ ವಿರುದ್ಧವೇ ತಿರುಗಿಬಿದ್ಧ ಆನಂದ್ ಸಿಂಗ್, ಅನಿಲ್ ಲಾಡ್ ವಿರೋಧ

ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಪರಭಾರೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್, ಅನಿಲ್ ಲಾಡ್ ಕೂಡ ಭೂಮಿ ...

ಬಳ್ಳಾರಿ: ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಪರಭಾರೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್, ಅನಿಲ್ ಲಾಡ್ ಕೂಡ ಭೂಮಿ ಪರಭಾರೆ ವಿಷಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯನ್ನು ರಿಪಬ್ಲಿಕ್ ಆಫ್ ಜಿಂದಾಲ್ ಆಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಇದಕ್ಕಾಗಿ ನಾವು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 3686 ಎಕರೆಯಷ್ಟು ದೊಡ್ಡ ಪ್ರಮಾಣದ ಭೂಮಿಯನ್ನು ಜಿಂದಾಲ್ ಸಂಸ್ಥೆಗೆ ಏಕೆ ಕೊಡಬೇಕು. ಜಿಂದಾಲ್ ಸಂಸ್ಥೆ ಎಷ್ಟು ಉದ್ಯೋಗಗಳನ್ನು ನೀಡಿದೆ.ಎಷ್ಟು ಪ್ರಮಾಣದ ಗ್ರಾಮಗಳನ್ನು ಅಭಿವೃದ್ಧಿ ಮಾಡಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಅವರು ಹೇಳಿದರು.
ನಾವು ಬಳ್ಳಾರಿ ಸ್ಥಳೀಯ ಶಾಸಕರಾಗಿದ್ದು, ಇಲ್ಲಿನ ಜನರ ಒತ್ತಾಸೆಯ ಮೇರೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಸರ್ಕಾರದ ನಿರ್ಧಾರಕ್ಕಾಗಲಿ, ಸಂಸ್ಥೆಯ ವಿರುದ್ಧವಾಗಲಿ ನಾವಿಲ್ಲ. ಜನರ ಪರವಾಗಿ ನಾವಿದ್ದೇವೆ. ಸರ್ಕಾರ ಜನರ ಆಶಯದಂತೆ ನಡೆದುಕೊಳ್ಳಬೇಕು. ಪೊಲೀಸರು, ಅಧಿಕಾರಿಗಳು ಜಿಂದಾಲ್ ರಕ್ಷಣೆಗೆ ನಿಂತಿದ್ದಾರೆ ಎಂದು ಆರೋಪಿಸಿದರು.
ಈ ಬಗ್ಗೆ ಸಚಿವರು ಮತ್ತು ಸಂಡೂರು ಶಾಸಕರಾದ ತುಕಾರಾಂ ಅವರು ದನಿಯೆತ್ತುತ್ತಿಲ್ಲ. ಅವರು ಏಕೆ ಮೌನವಾಗಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದರು. ಸರ್ಕಾರ ಭೂಮಿಯನ್ನು ಕಂಪನಿಗೆ ಗುತ್ತಿಗೆ ಆಧಾರದಲ್ಲಿ ನೀಡಿದರೆ ನಮ್ಮದೇನು ಅಭ್ಯಂತರವಿಲ್ಲ.
ಕ್ರಯಕ್ಕೆ ನೀಡುವುದಕ್ಕೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ. ಇದಕ್ಕಾಗಿ ನಾವು ಯಾವ ತ್ಯಾಗಕ್ಕಾದರೂ ಸಿದ್ದರಿದ್ದೇವೆ. ನಾವು ಹೋರಾಟ ಮಾಡಲು ಸಿದ್ದರಿದ್ದೇವೆ ಎಂದು ಆನಂದ್ ಸಿಂಗ್ ತಿಳಿಸಿದರು.
ಮಾಜಿ ಶಾಸಕ ಅನಿಲ್ ಲಾಡ್ ಮಾತನಾಡಿ, ಜಿಂದಾಲ್ ಕಂಪನಿಗೆ ನೀಡಿದ ಭೂಮಿಯನ್ನು ಇಂಡಸ್ಟ್ರಿಯಲ್‍ಗೆ ಕನ್‍ವರ್ಷನ್ ಲ್ಯಾಂಡಾಗಿ ಪರಿವರ್ತಿಸುತ್ತಾರೆ. ಆಗ ಎಕರೆಗೆ ಒಂದು ಕೋಟಿಯಷ್ಟು ಬೆಲೆ ಬರುತ್ತದೆ. ಇದನ್ನು ಬ್ಯಾಂಕ್‍ನಲ್ಲಿ ಇಡದಂತೆ ಷರತ್ತು ವಿಧಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT