ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ: ರಾಜಕೀಯ ಕುತೂಹಲಕ್ಕೆ ರೆಕ್ಕೆಪುಕ್ಕ!

ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೋಕಸಭೆಯ ಮಾಜಿ ಪ್ರತಿಪಕ್ಷದ ನಾಯಕ, ಕಾಂಗ್ರೆಸ್ ನ ಹಿರಿಯ ...

ಬೆಂಗಳೂರು: ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೋಕಸಭೆಯ ಮಾಜಿ ಪ್ರತಿಪಕ್ಷದ ನಾಯಕ, ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರನ್ನು ಬೆಂಗಳೂರಿನಲ್ಲಿ ಅವರ ನಿವಾಸದಲ್ಲಿ ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. 
ಕಳೆದ ರಾತ್ರಿ ಸಿಎಂ ಖರ್ಗೆಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸುಮಾರು 1 ಗಂಟೆ ಕಾಲ ಮಾತುಕತೆ ನಡೆಸಿದರು.  ಇದೊಂದು ಸೌಹಾರ್ದಯುತ ಭೇಟಿಯಷ್ಟೆ ಎಂದು ಖರ್ಗೆ ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಲ್ಲಿಕಾರ್ಜುನ ಖರ್ಗೆಯವರ ಮಾಜಿ ಕ್ಷೇತ್ರ ಗುರುಮಿಟ್ಕಲ್ ನಲ್ಲಿ ನಾಳೆ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.
ಆದರೆ ರಾಜಕೀಯ ಪಂಡಿತರು ಲೆಕ್ಕಾಚಾರ, ಊಹೆ ಮಾಡುವ ಪ್ರಕಾರ ಸಿಎಂ ಭೇಟಿಯ ಹಿಂದೆ ಹಲವು ಉದ್ದೇಶಗಳು ಅಡಗಿದ್ದವು. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುಗಳ ಸರಮಾಲೆಯನ್ನೇ ಹೊತ್ತು ತಂದಿದ್ದಾರೆ. ಇಬ್ಬರೂ ತಮ್ಮ ಸಾಮಾನ್ಯ ಶತ್ರು ಸಿದ್ದರಾಮಯ್ಯನವರನ್ನು ಹೇಗೆ ಮಣಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾತುಕತೆ ನಡೆಸಿರಬಹುದು ಎಂದು ಲೆಕ್ಕಾಚಾರ ಹಾಕುತ್ತಿದ್ದಾರೆ. 
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಖರ್ಗೆ ಮತ್ತು ಕುಮಾರಸ್ವಾಮಿಯವರು ಗುಲ್ಬರ್ಗದಲ್ಲಿ ಭೇಟಿಯಾಗಿದ್ದರು. ಆಗ ಅಲ್ಲಿ ಖರ್ಗೆಯವರಿಗೆ ಮುಖ್ಯಮಂತ್ರಿ ಪದವಿ ನಿರಾಕರಿಸಿದ್ದು ಮತ್ತು ದಲಿತ ಮುಖ್ಯಮಂತ್ರಿ ವಿಚಾರಗಳು ಪ್ರಸ್ತಾಪವಾಗಿದ್ದವು. ಅವರಿಬ್ಬರ ಭೇಟಿ ಸಿದ್ದರಾಮಯ್ಯನವರಿಗೆ ಹಿಡಿಸಿರಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT