ಪ್ರಜ್ವಲ್ ರೇವಣ್ಣ, ತೇಜಸ್ವಿ ಸೂರ್ಯ 
ರಾಜಕೀಯ

ಸದನದಲ್ಲಿ ಪ್ರಜ್ವಲಿಸಿದ ಪ್ರಜ್ವಲ್ ರೇವಣ್ಣ, ಕಂಗೊಳಿಸಿದ ತೇಜಸ್ವಿ ಸೂರ್ಯ

ಕರ್ನಾಟಕದ ಯುವ ಸಂಸದರಿಬ್ಬರು ಲೋಕಸಭೆಯಲ್ಲಿ ತಮ್ಮ ಮಾತುಗಳ ಮೂಲಕ ಸುದ್ದಿಯಾಗಿ ಭರವಸೆಯ ಯುವ ನಾಯಕರು ...

ನವದೆಹಲಿ: ಕರ್ನಾಟಕದ ಯುವ ಸಂಸದರಿಬ್ಬರು ಲೋಕಸಭೆಯಲ್ಲಿ ತಮ್ಮ ಮಾತುಗಳ ಮೂಲಕ ಸುದ್ದಿಯಾಗಿ ಭರವಸೆಯ ಯುವ ನಾಯಕರು ಎನಿಸಿಕೊಂಡಿದ್ದಾರೆ. ಅವರೇ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತೇಜಸ್ವಿ ಸೂರ್ಯ.
ರಾಜ್ಯದಲ್ಲಿ ಅತಿ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ ಎಂದು ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.
ನಿನ್ನೆ ಅಧಿವೇಶನದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ದೇಶ ಪ್ರಗತಿಯತ್ತ ಮುನ್ನುಗುತ್ತಿದ್ದರೆ, ಕರ್ನಾಟಕ ಮಾತ್ರ ಹಿಂದುಳಿಯುತ್ತಿದೆ. ನನ್ನ ರಾಜ್ಯ ಅಭಿವೃದ್ಧಿ ಕಾಣಬೇಕು ಎಂಬುದು ನನ್ನ ಇಚ್ಛೆ. ರಾಜ್ಯದಲ್ಲಿ ಕೋಟ್ಯಂತರ ರೂಪಾಯಿ ಐಎಂಎಫ್​ ಹಗರಣ ನಡೆದಿದೆ. 10 ಸಾವಿರ ಎಫ್​ಐಆರ್​ ದಾಖಲಾದರೂ ಮೈತ್ರಿ ಸರ್ಕಾರದ ನಾಯಕರ ಬೆಂಬಲದಿಂದ ಏನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕದಲ್ಲಿ‌ ಹೊಸ ಸರ್ಕಾರ ಬರಲಿದೆ. ಹೊಸ ಕರ್ನಾಟಕದ ಉದಯ ನಮ್ಮ ಯುವ ಜನರ ಕೈಯಲಿದೆ. ನಮ್ಮ ಆಶಯ ಅನುಭವ, ಚಿಂತನೆಗಳನ್ನು ಕೊಡುವತ್ತ ನಾವು ನೋಡಬೇಕಿದೆ ಎಂದು ಪರೋಕ್ಷವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ಸೂಚನೆ ನೀಡಿದರು.
ಇನ್ನು ತೇಜಸ್ವಿ ಸೂರ್ಯ ಮಾತಿಗೆ ಸದನದಲ್ಲಿಯೇ ತಿರುಗೇಟು ನೀಡಿದ ನೂತನ ಸಂಸದ ಪ್ರಜ್ವಲ್​ ರೇವಣ್ಣ ಸದನವನ್ನು ದಾರಿ ತಪ್ಪಿಸಬೇಡಿ. ಐಎಂಎಫ್​ ಹಗರಣದಲ್ಲಿ ಕಾಂಗ್ರೆಸ್​ ಸಚಿವ ರೋಷನ್​ ಬೇಗ್​ ಹೆಸರು ಕೇಳಿ ಬಂದಿದ್ದು, ಅವರನ್ನು ಪಕ್ಷ ಅಮಾನತು ಮಾಡಿದೆ. ಐಎಂಎಫ್​ ಕುರಿತು ಸರ್ಕಾರ ತನಿಖೆಗೆ ಕೂಡ ಆಗ್ರಹಿಸಿದೆ ಎಂದರು.
2009ರಿಂದ 2013ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕಾಯುಕ್ತ ಸಂತೋಷ್ ಹೆಗ್ಡೆ ವರದಿಯಲ್ಲಿ ಬಿಜೆಪಿ ನಾಯಕ ಯಡಿಯೂರಪ್ಪ ಅವರನ್ನು ಆರೋಪಿಯೆಂದು ಉಲ್ಲೇಖಿಸಿರುವ ಬಗ್ಗೆ ನೆನಪಿಸಿದರು.
ಮಂಡ್ಯ ಭಾಗದ ರೈತರಿಗೆ ಎರಡು ಟಿಎಂಸಿ ನೀರು ಕೊಡಿ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇದುವರೆಗೂ ಕರ್ನಾಟಕದಲ್ಲಿ ಸಾವಿರದ 600 ರೈತರು ಮೃತಪಟ್ಟಿದ್ದಾರೆ. ತಮಿಳುನಾಡು ಕೂಡ ನೀರು ಕೇಳುತ್ತಿದೆ. ಮಂಡ್ಯದ ಜನರಿಗೆ ಮಾನವೀಯತೆ ದೃಷ್ಟಿಯಿಂದ ನೀರು ಬಿಡಿ. ಕೇಂದ್ರ ಸಚಿವ ಸದಾನಂದಗೌಡ ಅವರ ಮೂಲಕ ಒತ್ತಾಯಿಸುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT