ಚಲುವರಾಯಸ್ವಾಮಿ 
ರಾಜಕೀಯ

ಮಗನ ಸೋಲಿನ ದ್ವೇಷದಿಂದ ಜಿಲ್ಲೆಯನ್ನು ಕಡೆಗಣಿಸಬೇಡಿ: ಚಲವರಾಯಸ್ವಾಮಿ

ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಲೋಕಸಭೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತ ಎಂಬ ಕಾರಣದಿಂದಾಗಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ..

ಮಂಡ್ಯ: ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಲೋಕಸಭೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತ ಎಂಬ ಕಾರಣದಿಂದಾಗಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ಮುಖ್ಯಮಂತ್ರಿಯವರಿಗೆ ಮಾಜಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದಲ್ಲಿ ರೈತರ ಬೆಳೆಗೆ ಕಾವೇರಿ ನೀರು ಬಿಡುವ ಬಗ್ಗೆ ಮಾತನಾಡಿದ ಅವರು, ರೈತರಿಗೆ 10-15 ದಿನ ನೀರು ಬಿಡುವ ಅವಕಾಶ ಇತ್ತು. ದುರಾದೃಷ್ಟವೆಂದರೇ ಜಿಲ್ಲೆಯ ಒಬ್ಬ ಜನಪ್ರತಿನಿಧಿಯೂ ಕಾವೇರಿ ಸಭೆ ಕರೆಯಲಿಲ್ಲ. ಮುಖ್ಯಮಂತ್ರಿ ಬಳಿಯೂ ಜಿಲ್ಲೆಯ ಸಮಸ್ಯೆ ಬಗ್ಗೆ ಹೇಳಲಿಲ್ಲ. ಅದಕ್ಕೆ ಕಾರಣ ಕಳೆದ ಚುನಾವಣೆಯಲ್ಲಿ ವ್ಯತ್ಯಾಸ ಮಾಡಿದರು ಎಂದು ಸಿಟ್ಟು ಬಂದಿದೆಯೋ, ಜನಕ್ಕೆ ಸಹಾಯ ಮಾಡೋದು ಬೇಡ ಎಂಬ ಅಸಮಾಧಾನ ಆಗಿದೆಯೋ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
ಈಗ ನೀರನ್ನು ಬಿಡಲು ಪ್ರಾಧಿಕಾರದ ಒಪ್ಪಿಗೆ ಬೇಕು ಎಂಬ ಸಬೂಬು ಹೇಳುತ್ತಿದ್ದಾರೆ. ಪ್ರಾಧಿಕಾರ ರಚನೆ ಆದ ಮೇಲೂ ಚುನಾವಣೆಗೆ ಮುಂಚೆ ಪ್ರಾಧಿಕಾರದ ಅನುಮತಿ ಪಡೆಯದೆ ಮೂರು ಬಾರಿ ನೀರು ಕೊಟ್ಟಿದ್ದಾರೆ. ನಂತರ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ ನಿದರ್ಶನ ಇದೇ ಸರ್ಕಾರದಲ್ಲಿ ಇದೆ. 
ಈ ಬಾರಿಯೂ ನೀರು ಬಿಡಲು ಅವಕಾಶ ಇದ್ದರೂ ನೀರು ಬಿಟ್ಟಿಲ್ಲ. ಇರುವ ನೀರನ್ನು ಬಳಸಬೇಡಿ ಎಂದು ಪ್ರಾಧಿಕಾರ ಹೇಳಿಲ್ಲ. ಬೆಳೆಗೂ ನೀರು ಕೊಟ್ಟು ಕುಡಿಯುವುದಕ್ಕೂ ನೀರು ಉಳಿಸಿಕೊಳ್ಳಬಹುದಿತ್ತು. ಆದರೆ ಖಡಾಖಂಡಿತವಾಗಿ ನೀರು ಬಿಡೋದು ಬೇಡ ಎಂದು ತೀರ್ಮಾನಿಸಿದ್ದಾರೆ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT