ಚಲುವರಾಯಸ್ವಾಮಿ 
ರಾಜಕೀಯ

ಮಗನ ಸೋಲಿನ ದ್ವೇಷದಿಂದ ಜಿಲ್ಲೆಯನ್ನು ಕಡೆಗಣಿಸಬೇಡಿ: ಚಲವರಾಯಸ್ವಾಮಿ

ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಲೋಕಸಭೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತ ಎಂಬ ಕಾರಣದಿಂದಾಗಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ..

ಮಂಡ್ಯ: ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಲೋಕಸಭೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತ ಎಂಬ ಕಾರಣದಿಂದಾಗಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ಮುಖ್ಯಮಂತ್ರಿಯವರಿಗೆ ಮಾಜಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದಲ್ಲಿ ರೈತರ ಬೆಳೆಗೆ ಕಾವೇರಿ ನೀರು ಬಿಡುವ ಬಗ್ಗೆ ಮಾತನಾಡಿದ ಅವರು, ರೈತರಿಗೆ 10-15 ದಿನ ನೀರು ಬಿಡುವ ಅವಕಾಶ ಇತ್ತು. ದುರಾದೃಷ್ಟವೆಂದರೇ ಜಿಲ್ಲೆಯ ಒಬ್ಬ ಜನಪ್ರತಿನಿಧಿಯೂ ಕಾವೇರಿ ಸಭೆ ಕರೆಯಲಿಲ್ಲ. ಮುಖ್ಯಮಂತ್ರಿ ಬಳಿಯೂ ಜಿಲ್ಲೆಯ ಸಮಸ್ಯೆ ಬಗ್ಗೆ ಹೇಳಲಿಲ್ಲ. ಅದಕ್ಕೆ ಕಾರಣ ಕಳೆದ ಚುನಾವಣೆಯಲ್ಲಿ ವ್ಯತ್ಯಾಸ ಮಾಡಿದರು ಎಂದು ಸಿಟ್ಟು ಬಂದಿದೆಯೋ, ಜನಕ್ಕೆ ಸಹಾಯ ಮಾಡೋದು ಬೇಡ ಎಂಬ ಅಸಮಾಧಾನ ಆಗಿದೆಯೋ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
ಈಗ ನೀರನ್ನು ಬಿಡಲು ಪ್ರಾಧಿಕಾರದ ಒಪ್ಪಿಗೆ ಬೇಕು ಎಂಬ ಸಬೂಬು ಹೇಳುತ್ತಿದ್ದಾರೆ. ಪ್ರಾಧಿಕಾರ ರಚನೆ ಆದ ಮೇಲೂ ಚುನಾವಣೆಗೆ ಮುಂಚೆ ಪ್ರಾಧಿಕಾರದ ಅನುಮತಿ ಪಡೆಯದೆ ಮೂರು ಬಾರಿ ನೀರು ಕೊಟ್ಟಿದ್ದಾರೆ. ನಂತರ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ ನಿದರ್ಶನ ಇದೇ ಸರ್ಕಾರದಲ್ಲಿ ಇದೆ. 
ಈ ಬಾರಿಯೂ ನೀರು ಬಿಡಲು ಅವಕಾಶ ಇದ್ದರೂ ನೀರು ಬಿಟ್ಟಿಲ್ಲ. ಇರುವ ನೀರನ್ನು ಬಳಸಬೇಡಿ ಎಂದು ಪ್ರಾಧಿಕಾರ ಹೇಳಿಲ್ಲ. ಬೆಳೆಗೂ ನೀರು ಕೊಟ್ಟು ಕುಡಿಯುವುದಕ್ಕೂ ನೀರು ಉಳಿಸಿಕೊಳ್ಳಬಹುದಿತ್ತು. ಆದರೆ ಖಡಾಖಂಡಿತವಾಗಿ ನೀರು ಬಿಡೋದು ಬೇಡ ಎಂದು ತೀರ್ಮಾನಿಸಿದ್ದಾರೆ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT