ಚಲುವರಾಯಸ್ವಾಮಿ 
ರಾಜಕೀಯ

ಮಗನ ಸೋಲಿನ ದ್ವೇಷದಿಂದ ಜಿಲ್ಲೆಯನ್ನು ಕಡೆಗಣಿಸಬೇಡಿ: ಚಲವರಾಯಸ್ವಾಮಿ

ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಲೋಕಸಭೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತ ಎಂಬ ಕಾರಣದಿಂದಾಗಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ..

ಮಂಡ್ಯ: ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಲೋಕಸಭೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತ ಎಂಬ ಕಾರಣದಿಂದಾಗಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ಮುಖ್ಯಮಂತ್ರಿಯವರಿಗೆ ಮಾಜಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದಲ್ಲಿ ರೈತರ ಬೆಳೆಗೆ ಕಾವೇರಿ ನೀರು ಬಿಡುವ ಬಗ್ಗೆ ಮಾತನಾಡಿದ ಅವರು, ರೈತರಿಗೆ 10-15 ದಿನ ನೀರು ಬಿಡುವ ಅವಕಾಶ ಇತ್ತು. ದುರಾದೃಷ್ಟವೆಂದರೇ ಜಿಲ್ಲೆಯ ಒಬ್ಬ ಜನಪ್ರತಿನಿಧಿಯೂ ಕಾವೇರಿ ಸಭೆ ಕರೆಯಲಿಲ್ಲ. ಮುಖ್ಯಮಂತ್ರಿ ಬಳಿಯೂ ಜಿಲ್ಲೆಯ ಸಮಸ್ಯೆ ಬಗ್ಗೆ ಹೇಳಲಿಲ್ಲ. ಅದಕ್ಕೆ ಕಾರಣ ಕಳೆದ ಚುನಾವಣೆಯಲ್ಲಿ ವ್ಯತ್ಯಾಸ ಮಾಡಿದರು ಎಂದು ಸಿಟ್ಟು ಬಂದಿದೆಯೋ, ಜನಕ್ಕೆ ಸಹಾಯ ಮಾಡೋದು ಬೇಡ ಎಂಬ ಅಸಮಾಧಾನ ಆಗಿದೆಯೋ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
ಈಗ ನೀರನ್ನು ಬಿಡಲು ಪ್ರಾಧಿಕಾರದ ಒಪ್ಪಿಗೆ ಬೇಕು ಎಂಬ ಸಬೂಬು ಹೇಳುತ್ತಿದ್ದಾರೆ. ಪ್ರಾಧಿಕಾರ ರಚನೆ ಆದ ಮೇಲೂ ಚುನಾವಣೆಗೆ ಮುಂಚೆ ಪ್ರಾಧಿಕಾರದ ಅನುಮತಿ ಪಡೆಯದೆ ಮೂರು ಬಾರಿ ನೀರು ಕೊಟ್ಟಿದ್ದಾರೆ. ನಂತರ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ ನಿದರ್ಶನ ಇದೇ ಸರ್ಕಾರದಲ್ಲಿ ಇದೆ. 
ಈ ಬಾರಿಯೂ ನೀರು ಬಿಡಲು ಅವಕಾಶ ಇದ್ದರೂ ನೀರು ಬಿಟ್ಟಿಲ್ಲ. ಇರುವ ನೀರನ್ನು ಬಳಸಬೇಡಿ ಎಂದು ಪ್ರಾಧಿಕಾರ ಹೇಳಿಲ್ಲ. ಬೆಳೆಗೂ ನೀರು ಕೊಟ್ಟು ಕುಡಿಯುವುದಕ್ಕೂ ನೀರು ಉಳಿಸಿಕೊಳ್ಳಬಹುದಿತ್ತು. ಆದರೆ ಖಡಾಖಂಡಿತವಾಗಿ ನೀರು ಬಿಡೋದು ಬೇಡ ಎಂದು ತೀರ್ಮಾನಿಸಿದ್ದಾರೆ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT