ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಜಿಲ್ಲಾ ಯೂತ್ ಕ್ರಿಶ್ಚಿಯನ್ ಘಟಕ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲು ಪ್ರಜ್ವಲ್ ಸಮರ್ಥನಾಗಿದ್ದಾರೆ, ಹೀಗಾಗಿ ಹಾಸನ ಜನತೆ ಅವರನ್ನು ಬೆಂಬಲಿಸುತ್ತಾರೆ ಎಂದು ಹೇಳಿದ್ದಾರೆ,.
ತಮ್ಮ ಮಾವ ಮಾಜಿ ಪ್ರಧಾನಿ ದೇವೇಗೌಡರು ಪ್ರಜ್ವಲ್ ಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ, ತಂದೆ ರೇವಣ್ಣ, ಚಿಕ್ಕಪ್ಪ ಕುಮಾರಸ್ವಾಮಿಸ ಹಾಗೂ ತಾತ ದೇವೇಗೌಡರಿಂದ ಪ್ರಜ್ವಲ್ ರಾಜಕೀಯದ ಪಟ್ಟುಗಳನ್ನು ಕರಗತ ಮಾಡಿಕೊಂಡಿದ್ದಾರೆ, ಜನರ ಹೃದಯ ಗೆದ್ದಿರುವ ಪ್ರಜ್ವಲ್ ರಾಜಕೀಯ ಪ್ರವೇಶ ಬಯಸಿದ್ದಾರೆ ಎಂದು ತಿಳಿಸಿದ್ದಾರೆ.