ಬೆಂಗಳೂರು: ಕಾಂಗ್ರೆಸ್ ಶಾಸಕರಾದ ಕಂಪ್ಲಿ ಗಣೇಶ್ ಹಾಗೂ ಆನಂದ್ ಸಿಂಗ್ ಹೊಡೆದಾಡಿಕೊಂಡಿದ್ದ ವಿಡಿಯೋ ಇದೀಗ ಬಹಿರಂಗವಾಗಿದೆ.
ಆಪರೇಷನ್ ಕಮಲದಿಂದ ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ತನ್ನ ಎಲ್ಲ ಶಾಸಕರನ್ನು ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಇರಿಸಿತ್ತು. ಈ ವೇಳೆ ಗಣೇಶ್ ಮತ್ತು ಆನಂದ್ ಸಿಂಗ್ ಆವಾಚ್ಯ ಶಬ್ದಗಳಿಂದ ಹೊಡೆದಾಡಿಕೊಂಡಿದ್ದು ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು.
ವಿಡಿಯೋದಲ್ಲಿ ಆ ಮಹಿಳೆ ಎಂಬ ಮಾತುಗಳು ಕೇಳಿಬಂದಿದೆ. ಇಬ್ಬರ ಜಗಳಕ್ಕೆ ಕಾರಣವಾದ ಈ ಮಹಿಳೆ ಯಾರೆಂಬುದರ ಬಗ್ಗೆ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಆರಂಭಗೊಂಡಿದೆ. ಮೇಲ್ನೋಟಕ್ಕೆ ಮಹಿಳೆಗಾಗಿಯೇ ಈ ಜಗಳ ನಡೆದಿದೆ ಎಂದು ದೃಶ್ಯಗಳು ಹೇಳುತ್ತಿವೆ.
ರೆಸಾರ್ಟ್ ಸೇರಿದ ಶಾಸಕರು ಅಂದು ರಾತ್ರಿ ಪಾರ್ಟಿ ಮಾಡಿದ್ದರು. ಈ ವೇಳೆ ಮದ್ಯ ಸೇವನೆ ಮಾಡಿದ್ದ ಆನಂದ್ ಸಿಂಗ್ ನೇರವಾಗಿ ಗಣೇಶ್ ಕೋಣೆಗೆ ಎಂಟ್ರಿ ನೀಡಿದ್ರು, ಈ ವೇಳೆ ಕೋಣೆಯಲ್ಲಿ ಗಣೇಶ್ ಕೊರಳಪಟ್ಟಿ ಹಿಡಿದ ಆನಂದ್ ಸಿಂಗ್ ಜಗಳಕ್ಕೆ ನಿಂತಿದ್ದರು. ಆನಂದ್ ಸಿಂಗ್ ಹಲ್ಲೆಗೆ ಮುಂದಾಗುತ್ತಿದ್ದಂತೆ ಗಣೇಶ್ ಅಣ್ಣ ನೀವು ಮಾಡುತ್ತಿರುವುದು ತಪ್ಪು ಎಂದು ಹೇಳುವುದನ್ನು ವಿಡಿಯೋದಲ್ಲಿ ನೋಡಬಹುದು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos