ಸಿದ್ದರಾಮಯ್ಯ 
ರಾಜಕೀಯ

ಉದ್ದದ ನಾಮ ಇಟ್ಟವರ ಕಂಡರೆ ಭಯ: ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ನಾಮ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯವಾಗತ್ತೆ ಎಂದಿದ್ದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ವ್ಯಾಪಕ ಚರ್ಚೆಯಾಗುತ್ತಿದ್ದಂತೆ ಅವರು ತಮ್ಮ ಹೇಳಿಎಕೆ ಸಂಬಂಧ ಸ್ಪಷ್ಟನೆ...

ಬೆಂಗಳೂರು: ನಾಮ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯವಾಗತ್ತೆ ಎಂದಿದ್ದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ವ್ಯಾಪಕ ಚರ್ಚೆಯಾಗುತ್ತಿದ್ದಂತೆ ಅವರು ತಮ್ಮ ಹೇಳಿಎಕೆ ಸಂಬಂಧ ಸ್ಪಷ್ಟನೆ ನಿಡಿದ್ದಾರೆ.
"ಹೌದು, ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ  ನಾನು ಈ ಹೇಳಿಕೆ ನೀಡಿದ್ದೆ" ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
"ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ‌ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ ಬಿಜೆಪಿ ನಾಯಕರೆಲ್ಲ ಇವುಗಳನ್ನೆಲ್ಲ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳಲು ಹೊರಟರೋ, ಅದ ನಂತರ ಕುಂಕುಮ,ಕಾವಿ ಹಾಕಿಕೊಂಡವರನ್ನು ಜನತೆ ಸಂಶಯ-ಭಯದಿಂದ ನೋಡುವಂತಾಗಿದೆ
"ನಾನು ಬಿಜೆಪಿ ನಾಯಕರಿಗಿಂತ ಒಳ್ಳೆಯ ಹಿಂದು. ನಾನೆಂದೂ ಅವರಂತೆ ತಿಲಕ,ಕಾವಿ, ಧರ್ಮಗಳನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿಲ್ಲ. ನನ್ನದು ಜನಪರ ರಾಜಕಾರಣ, ದೇವರು, ಧರ್ಮ ಎಲ್ಲ ನನ್ನ ಮನೆಯೊಳಗಿನ ನಂಬಿಕೆ." ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ಬಾಗಲಕೋಟೆಯಲ್ಲಿ ಕೆಂದೂರು ಕೆರೆಗೆ ನೀರು ತುಂಬಿಸುವ ಯೋಜನೆ ಚಾಲನೆ ನೀಡಿ ಮಾತನಾಡಿದ ಅವರು, ಯಾಕೋ ಗೊತ್ತಿಲ್ಲ ನನಗೆ ಹಣೆಗೆ ಉದ್ದ ನಾಮ ಇಟ್ಟುಕೊಂಡವರನ್ನು ಕಂಡರೆ ಭಯವಾಗುತ್ತದೆ ಎಂದು ಹೇಳಿದುದು ಭಾರೀ ಚರ್ಚೆಗೆ ಕಾರಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT