ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಮಂಡ್ಯ ಜನತೆ ನಾಡಿಮಿಡಿತ ಅರಿತು ನನಗೆ ಟಿಕೆಟ್: ನಿಖಿಲ್ ಕುಮಾರಸ್ವಾಮಿ

ಮಂಡ್ಯ ಜನತೆ ನಾಡಿಮಿಡಿತ ಅರಿತು ನನಗೆ ಲೋಕಸಭೆಗೆ ಸ್ಪರ್ಧಿಸಲು ಜೆಡಿಎಸ್ ಟಿಕೆಟ್ ನಿಡಲಾಗುತ್ತಿದೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಶೃಂಗೇರಿ: ಮಂಡ್ಯ ಜನತೆ ನಾಡಿಮಿಡಿತ ಅರಿತು ನನಗೆ ಲೋಕಸಭೆಗೆ ಸ್ಪರ್ಧಿಸಲು ಜೆಡಿಎಸ್ ಟಿಕೆಟ್ ನಿಡಲಾಗುತ್ತಿದೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 

ಇದೇ ಮೊದಲ ಬಾರಿಗೆ ಕುಟುಂಬ ಸದಸ್ಯರೊಡನೆ ಶೃಂಗೇರಿಗೆ ಆಗಮಿಸಿರುವ ನಿಖಿಲ್ ಶಾರದಾಂಬೆಯ ದರ್ಶನ, ಗುರುಗಳ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ. ಈ ಬಳಿಕ ಮಾದ್ಯಮದವರೊಡನೆ ಮಾತನಾಡಿದ ನಿಖಿಲ್ "ಜೆಡಿಎಸ್ ನಾಯಕರು ಮಂಡ್ಯದ ಜನತೆಯ ಅಭಿಪ್ರಾಯ ಪರಿಗಣಿಸಿ ನನಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ" ಎಂದರು.

"ನಾನು ಈ ದಿನದಿಂದಲೇ ಮಂಡ್ಯದ ಜನತೆಯ ಕಾಳಜಿ ವಹಿಸಲಿದ್ದೇನೆ. ಶೃಂಗೇರಿ ಗುರುಗಳ ಆಶೀರ್ವಾದ ಪಡೆದು ಇಂದಿನಿಂದ ನಾನು ಜನಸೇವೆಗೆ ನಿಲ್ಲುತ್ತೇನೆ. ಮಂಡ್ಯದ ಜನರ ನಾಡಿಮಿಡಿತ ಅರಿತು ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಲು ಮುಂದಾಗಿದ್ದಾರೆ" ಅವರು ಹೇಳಿದ್ದಾರೆ.

ಗೋ ಬ್ಯಾಕ್ ನಿಖಿಲ್ ಅಭಿಯಾನ
ಈ ನಡುವೆ ಸಾಮಾಜಿಕ ತಾಣಗಳಲ್ಲಿ ಜೆಡಿಎಸ್ ನಾಯಕರ ಕುಟುಂಬ ರಾಜಕಾರಣದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಅಲ್ಲದೆ ಮಂಡ್ಯದಲ್ಲಿ ಲೋಕಕಣಕ್ಕಿಳಿಯಲಿರುವ ಸಿಎಂ ಪುತ್ರ ನಿಖಿಲ್ ವಿರುದ್ಧ ಸಹ ಆಕ್ರೋಶ ವ್ಯಕತವಾಗಿದೆ. "ಗೋ ಬ್ಯಾಕ್ ನಿಖಿಲ್" ಎಂಬ ಹೊಸ ಅಭಿಯಾನವೊಂದು ಫೇಸ್ ಬುಕ್, ಟ್ವಿಟ್ಟರ್ ನಲ್ಲಿ ಆರಂಭವಾಗಿದೆ.

ಶೃಂಗೇರಿಯಲ್ಲಿ ಈ ಸಂಬಂಧ ಂಆತನಾಡಿದ ನಿಖಿಲ್ ನಾನು ಇಂತಹಾ ಅಭಿಯಾನದ ಕುರಿತು ಏನನ್ನೂ ಹೇಳಲಾರೆ, ಆದರೆ ಮಂಡ್ಯ ಜನರು ನನ್ನ ಬೆಂಬಲಕ್ಕಿದ್ದಾರೆ ಎಂದು ಪ್ರತಿಕ್ರಯಿಸಿದ್ದಾರೆ.

ಇದರ ನಡುವೆಯೇ ನಿಖಿಲ್ ಸ್ಪರ್ಧೆ ಕುರಿತು ಜೆಡಿಎಸ್ ಪಕ್ಷದ ನಾಯಕರ ನಡುವೆ ಉಂಟಾಗಬಹುದಾದ ಭಿನ್ನಮತ ಶಮನಕ್ಕೆ ಇಂದು ರಾತ್ರಿ ಮುಖ್ಯಮಂತ್ರಿಗಳು ತಮ್ಮ ಪಕ್ಷದ ನಾಯಕರಿಗೆ ಡಿನ್ನರ್ ಪಾರ್ಟಿ (ಭೋಜನಕೂಟ) ಆಯೋಜನೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT