ಡಾ ಉಮೇಶ್ ಜಾಧವ್ 
ರಾಜಕೀಯ

ಉಮೇಶ್ ಜಾಧವ್, ಮೂವರು ಬಂಡಾಯ ಕಾಂಗ್ರೆಸ್ ಶಾಸಕರಿಗೆ ಸ್ಪೀಕರ್ ನೊಟೀಸ್ ಜಾರಿ

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿರುವ ಉಮೇಶ್ ಜಾಧವ್ ಮತ್ತು ಮೂವರು ಬಂಡಾಯ ಶಾಸಕರಾದ...

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿರುವ ಉಮೇಶ್ ಜಾಧವ್ ಮತ್ತು ಮೂವರು ಬಂಡಾಯ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮ್ಟಳ್ಳಿ ಮತ್ತು ಬಿ ನಾಗೇಂದ್ರ ಅವರಿಗೆ ಸ್ಪೀಕರ್ ಕೆ ಆರ್ ರಮೇಶ್ ನೊಟೀಸ್ ಜಾರಿ ಮಾರ್ಚ್ 12ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನೊಟೀಸ್ ಜಾರಿ ಮಾಡಿದ್ದಾರೆ. ಚಿಂಚೋಳಿ ಕ್ಷೇತ್ರದ ಶಾಸಕರಾಗಿದ್ದ ಉಮೇಶ್ ಜಾಧವ್ ನಾಲ್ಕು ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆಯನ್ನು ಸ್ಪೀಕರ್ ಇನ್ನೂ ಸ್ವೀಕರಿಸಿಲ್ಲ.
ತಮ್ಮ ರಾಜೀನಾಮೆ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಉಮೇಶ್ ಜಾಧವ್, ತಮಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸ್ವಾತಂತ್ರ್ಯವಿದೆ. ನಾವು ಜೀತದಾಳುಗಳಲ್ಲ. ತಮ್ಮನ್ನು ಅನರ್ಹತೆಗೊಳಿಸುವುದು, ಬಿಡುವುದು ಸ್ಪೀಕರ್ ಗೆ ಬಿಟ್ಟ ತೀರ್ಮಾನ. ತಮಗೆ ಈ ಬಗ್ಗೆ ಯಾವುದೇ ಆತಂಕವಿಲ್ಲ ಎಂದರು.
ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ ಉಮೇಶ್ ಜಾಧವ್, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಯಾವುದೇ ಕಾನೂನು ತೊಂದರೆಗಳಾಗುವುದಿಲ್ಲ ಎಂದಿದ್ದಾರೆ ಎಂದರು.
ಆಪರೇಷನ್ ಕಮಲದಿಂದ 25ರಿಂದ 30 ಕೋಟಿ ರೂಪಾಯಿಗಳವರೆಗೆ ಉಮೇಶ್ ಜಾಧವ್ ಪಡೆದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಮಾಡಿರುವ ಆರೋಪದಿಂದ ತಮ್ಮ ಕ್ಷೇತ್ರದಲ್ಲಿ ತೊಂದರೆಯಾಗಿದೆ. ನನಗೆ ಯಾಕೆ ಹಣ ಬೇಕು, ಸರ್ಕಾರಿ ವೈದ್ಯನಾಗಿ ನಿವೃತ್ತಿ ಹೊಂದಿದ ನಂತರ ನನಗೆ ಪಿಂಚಣಿ ಹಣವಾಗಿ ತಿಂಗಳಿಗೆ ಒಂದೂವರೆ ಲಕ್ಷ ರೂಪಾಯಿ ಬರುತ್ತದೆ. ಈ ಆರೋಪಗಳೆಲ್ಲ ನನ್ನ ತೇಜೋವಧೆ ಮಾಡುವ ಯತ್ನವಷ್ಟೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT