ರಾಜನಾಥ್ ಸಿಂಗ್ 
ರಾಜಕೀಯ

ಹತರಾದ ಉಗ್ರರ ಸಂಖ್ಯೆ ಕೇಳುವುದು ನಮ್ಮ ಸೈನಿಕರ ಶೌರ್ಯ ಪ್ರಶ್ನಿಸುವಂತಿದೆ: ರಾಜನಾಥ್ ಸಿಂಗ್

ಪಾಕಿಸ್ತಾನದ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹತರಾದ ಉಗ್ರರ ಸಂಖ್ಯೆಯನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್....

ಮಂಗಳೂರು: ಪಾಕಿಸ್ತಾನದ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹತರಾದ ಉಗ್ರರ ಸಂಖ್ಯೆಯನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್ ಹಾಗೂ ಇತರೆ ಮಹಾಘಟಬಂಧನ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಹತರಾದ ಉಗ್ರರ ಸಂಖ್ಯೆ ಕೇಳುವ ರೀತಿ ನಮ್ಮ ಸೈನಿಕರ ಶೌರ್ಯ ಪ್ರಶ್ನಿಸುವಂತಿದೆ ಎಂದು ಹೇಳಿದ್ದಾರೆ.
ಇಂದು ನೆಹರೂ ಮೈದಾನದಲ್ಲಿ ಬಿಜೆಪಿ ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದ ರಾಜನಾಥ್ ಸಿಂಗ್, ಭಾರತ ವೈಮಾನಿಕ ದಾಳಿ ನಡೆಸುವ ಮೂಲಕ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದೆ. ಆದರೆ ಕೆಲ ಪಕ್ಷಗಳು ಈ ದಾಳಿಯನ್ನು ಅನುಮಾನದಿಂದ ನೋಡುತ್ತಿದ್ದು, ಹತರಾದ ಉಗ್ರ ಸಂಖ್ಯೆಯ ಬಗ್ಗೆ ಸಾಕ್ಷ್ಯ ಕೇಳುತ್ತಿವೆ. ಅವರಿಗೆ ಹತ್ಯೆಯಾದ ಉಗ್ರರ ಸಂಖ್ಯೆ ಬೇಕು. ಆದರೆ ಶೌರ್ಯವಂತರು ಮೃತ ದೇಹಗಳನ್ನು ಲೆಕ್ಕ ಹಾಕುವುದಿಲ್ಲ ಎಂದರು.
ಕಳೆದ ಐದು ವರ್ಷಗಳು ಮೂರು ಬಾರಿ ವೈಮಾನಿಕ ದಾಳಿ ನಡೆಸಿದ್ದೇವೆ. ಉರಿ ಮತ್ತು ಪುಲ್ವಾಮ ಉಗ್ರ ದಾಳಿ ನಂತರ ನಡೆದ ವೈಮಾನಿಕ ದಾಳಿಯ ಬಗ್ಗೆ ನಿಮಗೆಲ್ಲ ಗೊತ್ತಿದೆ. ಆದರೆ ಮೂರನೇ ದಾಳಿಯ ಬಗ್ಗೆ ನಾನು ಹೇಳುವುದಿಲ್ಲ ಎಂದರು.
ಇಂದು ಭಾರತ ಸದೃಢವಾಗಿದ್ದು, ಎಲ್ಲ ವಿರೋಧಿಗಳಿಗೆ ತಕ್ಕ ಉತ್ತರವನ್ನು ನೀಡುತ್ತಿದೆ. ನಾವು ಯಾರ ತಂಟೆಗೂ ಹೋಗಲ್ಲ. ಒಂದು ವೇಳೆ ನಮ್ಮ ತಂಟೆಗೆ ಯಾರದ್ರೂ ಬಂದ್ರೆ ಸುಮ್ಮನೆ ಬಿಡಲ್ಲ ಎಂಬ ನಿಯಮ ನಮ್ಮಲ್ಲಿದೆ. ಈಗಾಗಲೇ ಅಂತವರಿಗೆ ತಕ್ಕ ಪ್ರತ್ಯುತ್ತರವನ್ನು ನೀಡಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT