ಆರ್. ಅಶೋಕ ಮತ್ತು ಕಟ್ಟ ಸುಬ್ರಮಣ್ಯನಾಯ್ಡು 
ರಾಜಕೀಯ

ವರಿಷ್ಠರ ಮುಂದೆಯೇ ಬಿಜೆಪಿ ರಾಜ್ಯ ನಾಯಕರ ಕಿತ್ತಾಟ; ಅಶೋಕ್ -ನಾಯ್ಡು ನಡುವೆ ಗಲಾಟೆ

ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಅಸಮಾಧಾನ, ಆಕ್ರೋಶ ಸ್ಫೋಟಗೊಂಡಿದ್ದು ಪಕ್ಷದ ಉಸ್ತುವಾರಿ ಮುರುಳೀಧರ ರಾವ್‌ ....

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಅಸಮಾಧಾನ, ಆಕ್ರೋಶ ಸ್ಫೋಟಗೊಂಡಿದ್ದು ಪಕ್ಷದ ಉಸ್ತುವಾರಿ ಮುರುಳೀಧರ ರಾವ್‌ ಅವರ ಮುಂದೆಯೇ ಆರ್.ಅಶೋಕ್ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಡುವೆ ಮಾತಿನ ಚಕಮಕಿ, ವಾಗ್ದಾಳಿ ನಡೆದಿದೆ ಎಂದು ಹೇಳಲಾಗಿದೆ.
ನಿನ್ನೆ ಮಲ್ಲೇಶ್ವರಂ ನ ಪಕ್ಷದ ಕಚೇರಿಯಲ್ಲಿ ಇಬ್ಬರು ನಾಯಕರ ನಡುವೆ ಏರು ಧ್ವನಿಯಲ್ಲಿ ಬಿರುಸಿನ ಮಾತುಕತೆ, ವಾಗ್ವಾದ ನಡೆದಿದೆ ಎಂದು ಗೊತ್ತಾಗಿದೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ರಾಜಕೀಯ ವಿಚಾರವಾಗಿ ಇಬ್ಬರು ನಾಯಕರ ನಡುವೆ ಗಲಾಟೆ, ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಪುನಃ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿರುವ ಬಗ್ಗೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೆಂಡಾಮಂಡಲರಾಗಿದ್ದಾರೆ ಎಂದು ಹೇಳಲಾಗಿದೆ.
ಶಿವಾಜಿನಗರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಚಾರ ಕಾರ್ಯಕ್ಕೆ ಬಂದಾಗ ಅವರಿಗೆ ಚಪ್ಪಲಿ ತೋರಿಸಿದ ಕಾಂಗ್ರೆಸ್ ಮುಖಂಡರನ್ನು ಆರ್.ಅಶೋಕ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ, ಇದು ಸರಿಯಲ್ಲ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಏರು ದನಿಯಲ್ಲಿ ಅಶೋಕ್ ವಿರುದ್ಧ ಹರಿಹಾಯ್ದು ಸಭೆಯ ಅರ್ಧದಲ್ಲೇ ಕೋಪಮಾಡಿಕೊಂಡು ಎದ್ದು ಹೊರಟು ಹೋಗಿದ್ದಾರೆ ಎಂದು ಹೇಳಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT