ರೋಹಿಣಿ ನಿಲೇಕಣಿ ಮತ್ತು ತೇಜಸ್ವಿನಿ ಅನಂತ್ ಕುಮಾರ್ 
ರಾಜಕೀಯ

ಬೆಂಗಳೂರು ದಕ್ಷಿಣದಲ್ಲಿ ಮಹಿಳಾ ಮಣಿಯರ ಮುಖಾಮುಖಿ: ರೋಹಿಣಿ- ತೇಜಸ್ವಿನಿ ನಡುವೆ ಬಿಗ್ ಫೈಟ್?

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ...

ಬೆಂಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ವತಿಯಿಂದ ಇಬ್ಬರು ಮಹಿಳಾಮಣಿಯರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿ ಗೋಚರಿಸುತ್ತಿದೆ. 
ತಂತ್ರಕ್ಕೆ ಪ್ರತಿತಂತ್ರ ಎಂಬ ನೀತಿಯನ್ನು ಎರಡೂ ರಾಷ್ಟ್ರೀಯ ಪಕ್ಷಗಳು ಅನುಸರಿಸಲು ಮುಂದಾಗಿವೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಅನಂತ್‌ಕುಮಾರ್ ಅವರು ಆರು ಬಾರಿ ಪ್ರತಿನಿಧಿಸಿದ್ದರು. ಅವರ ಅಕಾಲಿಕ ನಿಧನದಿಂದ ಕ್ಷೇತ್ರ ತೆರವಾಗಿದ್ದು ಅವರ ಪತ್ನಿ ತೇಜಸ್ವಿನಿ ಅನಂತ್‌ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಬಿಜೆಪಿ ತೇಜಸ್ವಿನಿ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ಕೂಡ ನಂದನ್‌ ನೀಲಖೇಣಿ ಪತ್ನಿ ರೋಹಿಣಿ ನೀಲಖೇಣಿ ಅವರನ್ನು ಕಣಕ್ಕಿಳಿಸಲು ಗಂಭೀರ ಚಿಂತನೆ ಮಾಡಿದೆ. ಈ ಸಂಬಂಧ ಈಗಾಗಲೇ ರೋಹಿಣಿ ನೀಲಖೇಣಿ ಅವರನ್ನು ಹಿರಿಯ ನಾಯಕರು ಸಂಪರ್ಕ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ  . ಇಬ್ಬರು ಮಹಿಳಾಮಣಿಯರ ಜೊತೆಗೆ ಮಾಜಿ ಶಾಸಕ ಪ್ರಿಯಾಕೃಷ್ಣ ಹೆಸರೂ ಕೂಡ ಹರಿದಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT