ಬೆಂಗಳೂರು: ಮಾಜಿ ಸಚಿವ ಬಿಜೆಪಿ ಸೇರ್ಪಡೆಗೊಂಡು ಬಿಜೆಪಿಯಂದ ಹಾಸನ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ತಯಾರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಮಂಜು ಅವರು ಎರಡು ಮೂರು ಭಾರಿ ನನ್ನನ್ನು ಭೇಟಿ ಮಾಡಿದ್ದಾರೆ, ಜೊತೆಗೆ ಹಾಸನದಿಂದ ಸ್ಪರ್ಧಿಸಲು ಬಯಸಿದ್ದಾರೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎ.ಮಂಜು, ಸಮಾರಂಭವೊಂದರಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ. ಆದರೆ ಅದರ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಅವರು ತೆಗೆದುಕೊಳ್ಳುವ ನಿರ್ಧಾರದ ಮೇಲೆ ನನ್ನ ಸ್ಪರ್ಧೆ ನಿಂತಿದೆ ಎಂದು ಹೇಳಿದ್ದಾರೆ. ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ದಿಸುತ್ತಾರೆ ಎಂಬ ಬಗ್ಗೆ ಇನ್ನೂ ಪ್ರಕಟಿಸಿಲ್ಲ ಎಂದು ತಿಳಿಸಿದ್ದಾರೆ,
ದೇವೇಗೌಡರು ಹಾಸನದಿಂದ ಸ್ಪರ್ದಿಸಿದರೇ ನಾನು ಅವರನ್ನು ಬೆಂಬಲಿಸುತ್ತೇನೆ, ಆದರೆ ಪ್ರಜ್ವಲ್ ರೇವಣ್ಣ ಅವರನ್ನು ನಾನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.