ಮಂಡ್ಯ: ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ಅಂತ್ಯಕ್ರಿಯೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು ಎಂದು ಸುಮಲತಾ ಅಂಬರೀಷ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮಂಡ್ಯದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಅಂದು ರಕ್ಷಣಾ ಸಚಿವರಿಗೆ ಮನವಿ ಮಾಡಿ ಮಂಡ್ಯಕ್ಕೆ ಪಾರ್ಥಿವ ಶರೀರ ತರಲು ಪ್ರಯತ್ನಿಸಿದ್ದೆ. ಈಗ ಅಂಬರೀಷ್ ಅವರ ಆತ್ಮ ಏನು ಹೇಳುತ್ತದೆ ಯೋಚಿಸಿ? ಆದರೆ ಅಂಬಿ ಅಭಿಮಾನಿಗಳು ನಮ್ಮ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ. ನನಗೆ ನಿಖಿಲ್ ಬೇರೆಯಲ್ಲ, ಅಂಬರೀಷ್ ಮಗ ಬೇರೆಯಲ್ಲ. ಅಂಬರೀಷ್ ನಿಧನದ ಸುದ್ದಿ ನನಗೆ ಮೊದಲು ನೀಡಿದ್ದೇ ನಿಖಿಲ್ ಎಂದು ಹೇಳಿದ್ದರು.
ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ, ಅಂಬರೀಷ್ ಅವರ ಅಂತ್ಯಕ್ರಿಯೆ ಬಗ್ಗೆ ಮಾತನಾಡುವುದು ಮತ್ತು ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು. ಈ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos