ಸುಮಲತಾ 
ರಾಜಕೀಯ

ಅಂಬರೀಷ್ ಅಂತ್ಯಕ್ರಿಯೆ ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು: ಸಿಎಂ ವಿರುದ್ಧ ಸುಮಲತಾ ಗರಂ

ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ಅಂತ್ಯಕ್ರಿಯೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು ಎಂದು ಸುಮಲತಾ....

ಮಂಡ್ಯ: ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ಅಂತ್ಯಕ್ರಿಯೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು ಎಂದು ಸುಮಲತಾ ಅಂಬರೀಷ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮಂಡ್ಯದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಅಂದು ರಕ್ಷಣಾ ಸಚಿವರಿಗೆ ಮನವಿ ಮಾಡಿ ಮಂಡ್ಯಕ್ಕೆ ಪಾರ್ಥಿವ ಶರೀರ ತರಲು ಪ್ರಯತ್ನಿಸಿದ್ದೆ. ಈಗ ಅಂಬರೀಷ್ ಅವರ ಆತ್ಮ ಏನು ಹೇಳುತ್ತದೆ ಯೋಚಿಸಿ? ಆದರೆ ಅಂಬಿ ಅಭಿಮಾನಿಗಳು ನಮ್ಮ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ. ನನಗೆ ನಿಖಿಲ್ ಬೇರೆಯಲ್ಲ, ಅಂಬರೀಷ್ ಮಗ ಬೇರೆಯಲ್ಲ. ಅಂಬರೀಷ್ ನಿಧನದ ಸುದ್ದಿ ನನಗೆ ಮೊದಲು ನೀಡಿದ್ದೇ ನಿಖಿಲ್ ಎಂದು ಹೇಳಿದ್ದರು.
ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ, ಅಂಬರೀಷ್ ಅವರ ಅಂತ್ಯಕ್ರಿಯೆ ಬಗ್ಗೆ ಮಾತನಾಡುವುದು ಮತ್ತು ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು. ಈ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT