ಸುಮಲತಾ ಅಂಬರೀಷ್ ಮತ್ತು ಎಸ್, ಎಂ ಕೃಷ್ಣ, 
ರಾಜಕೀಯ

ಆಶೀರ್ವಾದ ಪಡೆಯಲು ಬಂದಿರುವೆ: ಎಸ್ ಎಂ ಕೃಷ್ಣ ಭೇಟಿ ನಂತರ ಸುಮಲತಾ ಹೇಳಿಕೆ

ನಟಿ ಸುಮಲತಾ ಅಂಬರೀಷ್ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ಇಂದು ಸದಾಶಿವನಗರದ ಮನೆಯಲ್ಲಿ ಭೇಟಿ ಮಾಡಿದರು...

ಬೆಂಗಳೂರು: ನಟಿ ಸುಮಲತಾ ಅಂಬರೀಷ್ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ಇಂದು ಸದಾಶಿವನಗರದ ಮನೆಯಲ್ಲಿ ಭೇಟಿ ಮಾಡಿದರು.
ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸುಮಲತಾ, ಹಿರಿಯರಾದ ಎಸ್ ಎಂ ಕೃಷ್ಣ ಅವರ ಆಶೀರ್ವಾದ ಪಡೆಯಲು ಬಂದಿರುವೆ, ಮಂಡ್ಯದ ಪರಿಸ್ಥಿತಿಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದೇನೆ, ನಾನು ಯಾರ ಬಗ್ಗೆಯೂ ವ್ಯಕ್ತಿಗತವಾಗಿ ಚರ್ಚೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಕೃಷ್ಣ ಅವರನ್ನು ಭೇಟಿಯಾಗಿದ್ದು ನನಗೆ ನೆಮ್ಮದಿ ತಂದಿದೆ ಎಂದು ಹೇಳಿದ್ದಾರೆ. 
ಪಕ್ಷೇತರವಾಗಿ ಸ್ಪರ್ಧಿಸಬೇಕೋ ಅಥವಾ ಪಕ್ಷಕ್ಕೆ ಸೇರ್ಪಡೆಗೊಂಡು ಸ್ಪರ್ಧಿಸಬೇಕೋ ಎಂಬ ಬಗ್ಗೆ ಮಾರ್ಚ್ 18 ರಂದು ತಿಳಿಸುವುದಾಗಿ ಸುಮಲತಾ ಹೇಳಿದ್ದಾರೆ.
ಇನ್ನೂ ಇದೇ ವೇಳೆ ಮಾತನಾಡಿದ ಎಸ್ ಎಂ ಕೃಷ್ಣ, ಸುಮಲತಾ ಅವರು ತಮ್ಮ ನಿಲುವು ಪ್ರಕಟಿಸಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT