ಕಿರುಹೊತ್ತಿಗೆ ಬಿಡುಗಡೆ ಮಾಡಿದ ಕಾಂಗ್ರೆಸ್ 
ರಾಜಕೀಯ

ಬಿಜೆಪಿಯದ್ದು ಸುಳ್ಳು ಪೊಳ್ಳು ಜೊಳ್ಳು ಭರವಸೆ: ಕಾಂಗ್ರೆಸ್ ನಿಂದ ಕಿರುಹೊತ್ತಿಗೆ ಬಿಡುಗಡೆ

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಮಾಡಿರುವ ಸಾಧನೆಗಳು ಏನೂ....

ಬೆಂಗಳೂರು: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ. ಮಾಡಿರುವ ಸಾಧನೆಗಳು ಏನೂ ಇಲ್ಲದಿರುವಾಗ ಬಿಜೆಪಿ ಭಾವನಾತ್ಮಕ ಹೇಳಿಕೆಗಳ ಮೂಲಕ ಮತ ಯಾಚಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ `ಸುಳ್ಳು, ಪೊಳ್ಳು, ಜೊಳ್ಳು’ ಎಂಬ ಘೋಷಣೆಯಡಿಯಲ್ಲಿ ಕಾಂಗ್ರೆಸ್ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದೆ.  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನರೇಗಾ ಯೋಜನೆ ದುರ್ಬಳಕೆ ಮಾಡುವ ಪ್ರಯತ್ನ ಮಾಡಿತ್ತು. ಭೂ ಸ್ವಾಧೀನ ಕಾಯ್ದೆ ಸಡಿಲ ಮಾಡುವ ಪ್ರಯತ್ನ ಮಾಡಿದರು. ಸಾಮಾನ್ಯ ಜನರ ಬಗ್ಗೆ ಬಿಜೆಪಿಯವರಿಗೆ ಕನಿಕರವಿಲ್ಲ. ಈ ಹಿಂದೆ ಮಂದಿರ ನಿರ್ಮಾಣದ ವಿಚಾರದಲ್ಲಿ ರಾಜಕಾರಣ ಮಾಡಿದರು. ಈಗ ರಾಷ್ಟ್ರೀಯತೆ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬೆಳಗಾವಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಅದನ್ನ ಬಹಿರಂಗಪಡಿಸಲು ಈಗ ಆಗುವುದಿಲ್ಲ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು ಎಂಬ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಹೀಗಾಗಿ ಅದರ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT