ಜಿ ಪರಮೇಶ್ವರ್ 
ರಾಜಕೀಯ

ತುಮಕೂರು ಕ್ಷೇತ್ರ ಪಡೆಯಲು ಡಿಸಿಎಂ ಪರಮೇಶ್ವರ್ ಹರಸಾಹಸ

ತುಮಕೂರಿನಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೇ ಸ್ಪರ್ಧಿಸಿದರೆ ತಾವೂ ಅವರಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ. ಸ್ಪರ್ಧಿಸದಿದ್ದರೆ ಕ್ಷೇತ್ರವನ್ನು....

ಬೆಂಗಳೂರು: ತುಮಕೂರಿನಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೇ ಸ್ಪರ್ಧಿಸಿದರೆ ತಾವೂ ಅವರಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ. ಸ್ಪರ್ಧಿಸದಿದ್ದರೆ ಕ್ಷೇತ್ರವನ್ನು ಕಾಂಗ್ರೆಸ್ ಗೆ ವಾಪಸ್ ನೀಡುವಂತೆ ಜೆಡಿಎಸ್‌ ವರಿಷ್ಠರಲ್ಲಿ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.
ಇಂದು ನಗರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, 10 ಹಾಲಿ ಸಂಸದರಿಗೆ ಟಿಕೆಟ್ ನೀಡುವಂತೆ ಪರಿಶೀಲನಾ ಸಮಿತಿ ರಾಹುಲ್ ಗಾಂಧಿ ಅವರಿಗೆ ಶಿಫಾರಸ್ಸು ಮಾಡಿತ್ತು. ಆದರೆ ದೇವೇಗೌಡ ಅವರು ರಾಹುಲ್‌ ಗಾಂಧಿ ಅವರೊಂದಿಗೆ‌ ಮಾತನಾಡಿ ತುಮಕೂರನ್ನು ಜೆಡಿಎಸ್‌ ತೆಕ್ಕೆಗೆ ಪಡೆದು ಕೊಂಡಿದ್ದಾರೆ. ಒಂದು ವೇಳೆ ದೇವೇಗೌಡ ಅವರೇ ತುಮಕೂರಿನಿಂದ ಸ್ಪರ್ಧಿಸುವುದಾದರೆ ಸ್ವಾಗತಾರ್ಹ.‌ ಅವರಿಗಾಗಿ‌ ನಾವೆಲ್ಲರೂ ಕೆಲಸ ಮಾಡುತ್ತೇವೆ. ಇಲ್ಲವಾದರೆ ನಮ್ಮ ಹಾಲಿ ಸಂಸದರಿಗೇ ಕ್ಷೇತ್ರ ಬಿಟ್ಟುಕೊಡುವಂತೆ ದೇವೇಗೌಡರಲ್ಲಿಯೂ‌ ಮನವಿ ಮಾಡಿದ್ದೇನೆ. ಅಗತ್ಯ ಬಿದ್ದರೆ ರಾಹುಲ್‌ ಗಾಂಧಿ ಅವರನ್ನು ಸಹ ಭೇಟಿ ಮಾಡುವುದಾಗಿ ಅವರು ತಿಳಿಸಿದರು. 
ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ತುಮಕೂರು ಕ್ಷೇತ್ರ ವಾಪಾಸ್ ಕಾಂಗ್ರೆಸ್ ಗೆ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಸಂಸದ ಮುದ್ದಹನುಮೇಗೌಡ, ಕ್ಷೇತ್ರ ಏಕೆ? ಹೇಗೆ ಕೈ ತಪ್ಪಿತು ಎಂದು  ತಾವು ಹೇಳುವುದು ಸರಿಯಾದ ಕ್ರಮವಲ್ಲ. ತಮಗೆ ಮತ್ತೆ ಕ್ಷೇತ್ರವನ್ನು ವಾಪಸ್ ನೀಡುತ್ತಾರೆ ಎಂಬ ಭರವಸೆಯಿದೆ. ತಾವೂ ಸಹ ಮಾಜಿ ಪ್ರಧಾನಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತನಾಡಿರುವುದಾಗಿ ತಿಳಿಸಿದರು.
ಮೈಸೂರು  ಉಳಿಸಿಕೊಳ್ಳಲು ಪರ್ಯಾಯವಾಗಿ ತುಮಕೂರನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆಯೇ ಎಂಬ ಪ್ರಶ್ಮಗೆ  ಪ್ರತಿಕ್ರಿಯಿಸಿದ ಅವರು, ಮೈಸೂರನ್ನು ತಂದು ತುಮಕೂರಿಗೆ ಸಂಕರ್ಪ ಮಾಡುವುದು ಸರಿಯಾದ ಕ್ರಮವಲ್ಲ. ಯಾರ ಯಾರ  ಲಿಂಕ್ ಎಲ್ಲಿರುತ್ತೋ ಗೊತ್ತಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಸಂಸತ್ ಅಧಿವೇಶನದ ಕೊನೆಯ ಕಲಾಪದವರೆಗೆ ತಾವು ಪ್ರಮಾಣಿಕವಾಗಿ ಕೆಲಸ ಮಾಡಿದ್ದು, ಈಗಲೂ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದೇನೆ. ಒಂದು ವೇಳೆ ತುಮಕೂರಿನಿಂದ ದೇವೇಗೌಡರು ಸ್ಪರ್ಧೆ ಮಾಡಿದರೆ ಕ್ಷೇತ್ರ ಬಿಟ್ಟುಕೊಡಲು ಸಿದ್ದರಿದ್ದೇವೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಇದಕ್ಕಿಂತ ಹೆಚ್ಚಿಗೆ ತಾವೇನು ಹೇಳಲು ಬಯಸುವುದಿಲ್ಲ ಎಂದು  ತುಮಕೂರು ಸಂಸದ ಮುದ್ದಹನುಮೇಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT