ಎಸ್‍.ಟಿ.ಸೋಮಶೇಖರ್ 
ರಾಜಕೀಯ

ಬೆಂ. ಉತ್ತರ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಗೆ ಭಾರೀ ಹೊಡೆತ- ಎಸ್‍.ಟಿ.ಸೋಮಶೇಖರ್

ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳುತ್ತದೆ. ಆದರೂ ಹೈಕಮಾಂಡ್ ಹೇಳಿರುವುದಾಗಿ ಶಾಸಕ ...

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳುತ್ತದೆ. ಆದರೂ ಹೈಕಮಾಂಡ್ ಹೇಳಿರುವುದಾಗಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್‍ ಹೈಕಮಾಂಡ್, ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಆದ್ದ ಅದನ್ನು ಪಾಲಿಸುತ್ತೇವೆ ಎಂದು ಬಿಡಿಎ ಅಧ್ಯಕ್ಷ ಹಾರಿಂದ ಎಐಸಿಸಿ ಆದೇಶ ಪಾಲಿಸುತ್ತೇವೆ. ಜೆಡಿಎಸ್‍ನಿಂದ ಯಾರೇ ಅಭ್ಯರ್ಥಿ ಸ್ಪರ್ಧಿಸಿದರೂ ಗೆಲ್ಲಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. 

ಕೆಲವರು ಅಮೃತ ಕುಡಿದರೂ ವಿಷ ಕುಡಿಯುತ್ತಿದ್ದೇವೆ ಎಂದು ಹೇಳುತ್ತಾರೆ, ಆದರೆ ನಾವು ವಿಷ ಕುಡಿದರೂ ಅಮೃತ ಕುಡಿಯುತ್ತಿದ್ದೇವೆ ಎಂದು  ಹೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಸೋಮಶೇಖರ್ ಪರೋಕ್ಷವಾಗಿ ಮುಖ್ಯಮಂತ್ರಿಗೆ ಟಾಂಗ್ ನೀಡಿದರು.

ಕ್ಷೇತ್ರದಲ್ಲಿ ಐದು ಕಾಂಗ್ರೆಸ್ ಶಾಸಕರಿದ್ದರೂ ಜೆಡಿಎಸ್‍ಗಾಗಿ ಕೆಲಸ ಮಾಡುತ್ತೇವೆ. ಇಂದು ಸಂಜೆ ಸಚಿವ ಕೃಷ್ಣ ಬೈರೇಗೌಡ ಅವರ ಮನೆಯಲ್ಲಿ ಸಭೆ ಕರೆಯಲಾಗಿದೆ. ಎಲ್ಲಾ ಶಾಸಕರು, ಸೋತ ಅಭ್ಯರ್ಥಿಗಳು, ಕಾಂಗ್ರೆಸ್ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಸೋಮಶೇಖರ್ ತಿಳಿಸಿದರು.

ಪಾಲಿಸುತ್ತೇವೆ ಎಂದು ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್‍ ಹೈಕಮಾಂಡ್, ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಆದ್ದರಿಂದ ಎಐಸಿಸಿ ಆದೇಶ ಪಾಲಿಸುತ್ತೇವೆ. ಜೆಡಿಎಸ್‍ನಿಂದ ಯಾರೇ ಅಭ್ಯರ್ಥಿ ಸ್ಪರ್ಧಿಸಿದರೂ ಗೆಲ್ಲಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. 
ಕೆಲವರು ಅಮೃತ ಕುಡಿದರೂ ವಿಷ ಕುಡಿಯುತ್ತಿದ್ದೇವೆ ಎಂದು ಹೇಳುತ್ತಾರೆ, ಆದರೆ ನಾವು ವಿಷ ಕುಡಿದರೂ ಅಮೃತ ಕುಡಿಯುತ್ತಿದ್ದೇವೆ ಎಂದು  ಹೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಸೋಮಶೇಖರ್ ಪರೋಕ್ಷವಾಗಿ ಮುಖ್ಯಮಂತ್ರಿಗೆ ಟಾಂಗ್ ನೀಡಿದರು.
ಕ್ಷೇತ್ರದಲ್ಲಿ ಐದು ಕಾಂಗ್ರೆಸ್ ಶಾಸಕರಿದ್ದರೂ ಜೆಡಿಎಸ್‍ಗಾಗಿ ಕೆಲಸ ಮಾಡುತ್ತೇವೆ. ಇಂದು ಸಂಜೆ ಸಚಿವ ಕೃಷ್ಣ ಬೈರೇಗೌಡ ಅವರ ಮನೆಯಲ್ಲಿ ಸಭೆ ಕರೆಯಲಾಗಿದೆ. ಎಲ್ಲಾ ಶಾಸಕರು, ಸೋತ ಅಭ್ಯರ್ಥಿಗಳು, ಕಾಂಗ್ರೆಸ್ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಸೋಮಶೇಖರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT