ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಆರ್ ಅಶೋಕ್ ಮತ್ತು ವಿ. ಸೋಮಣ್ಣ
ಬೆಂಗಳೂರು: ಈ ಬಾರಿ ಚಕ್ರವರ್ತಿ ನೇತೃತ್ವದಲ್ಲಿ ಎಲ್ಲರೂ ಒಟ್ಟಿಗೆ ಚುನಾವಣೆಗೆ ಹೋಗುತ್ತಿದ್ದೇವೆ, ಆದರೆ ಚಕ್ರವರ್ತಿಗೆ ಎಲ್ಲಾ ಇದೆ, ಧೈರ್ಯ ಕಡಿಮೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಮಾಜಿ ಡಿಸಿಎಂ ಆರ್ .ಅಶೋಕ್ ಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿನ ಸುತ್ತೂರು ಮಠಕ್ಕೆ ಬಿಜೆಪಿ ಅಭ್ಯರ್ಥಿ ತೇಜಸ್ವಿನಿ ಅನಂತ್ ಕುಮಾರ್ ಸೋಮಣ್ಣ ಹಾಗೂ ಆರ್. ಅಶೋಕ್ ಜೊತೆಗೂಡಿ ಭೇಟಿ ಮಾಡಿದರು. ಸ್ವಾಮಿಗಳ ಎದುರೇ ಅಶೋಕ್ ಗೆ ಟಾಂಗ್ ಕೊಟ್ಟ ಸೋಮಣ್ಣ ಪೇಚಿಗೀಡಾದರು.
ಸೋಮಣ್ಣಗೆ ಟಕ್ಕರ್ ಕೊಟ್ಟ ಅಶೋಕ್, ಕೆಟ್ಟದಾದರೇ ಅಶೋಕ್ ಕಾರಣ ಅಂತಾ ಹೇಳುತ್ತಾರೆ, ಆದರೆ ಒಳ್ಳೆಯದಾದರೇ ನಾನು ಲೆಕ್ಕಕ್ಕೆ ಇರುವುದಿಲ್ಲ, ಎಲ್ಲರನ್ನು ನನ್ನನ್ನು ಬಳಸಿಕೊಳ್ಳುತ್ಕಾರೆ, ಕೆಲಸ ಮುಗಿದ ಮೇಲೆ ನನ್ನನ್ನು ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ.
ಈ ಮಧ್ಯೆ ಮತ್ತೆ ಮಾತನಾಡಿದ ಸೋಮಣ್ಣ, ಅಶೋಕ್ ಮನಸ್ಸು ತುಂಬಾ ಒಳ್ಳೆಯದು, ಎಲ್ಲರು ಅವರ ವಿರುದ್ಧವಾಗಿದ್ದಾರೆ, ನಾನು ಮಾತ್ರ ಅವರ ಪರವಾಗಿದ್ದೇನೆ ಎಂದು ಸಮಾಧಾನ ಪಡಿಸಲು ಮುಂದಾದರು.
ಇನ್ನೂ ಇದೇ ವೇಳೆ ಮಾತನಾಡಿದ ಆರ್. ಅಶೋಕ್, ದಿವಂಗತ ಅನಂತ್ ಕುಮಾರ್ ಅವರ ಅನುಪಸ್ಥಿತಿಯಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ, ತೇಜಸ್ವಿನಿ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿಲಾಗಿದೆ, ಹೀಗಾಗಿ ಅವರ ಗೆಲುವಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos