ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಆರ್ ಅಶೋಕ್ ಮತ್ತು ವಿ. ಸೋಮಣ್ಣ 
ರಾಜಕೀಯ

ಚಕ್ರವರ್ತಿಗೆ ಎಲ್ಲಾ ಇದೆ, ಆದ್ರೆ ಧೈರ್ಯ ಕಡಿಮೆ: ಶ್ರಿಗಳ ಎದುರೇ ಆರ್.ಅಶೋಕ್-ಸೋಮಣ್ಣ ಟಾಕ್ ಫೈಟ್

ಈ ಬಾರಿ ಚಕ್ರವರ್ತಿ ನೇತೃತ್ವದಲ್ಲಿ ಎಲ್ಲರೂ ಒಟ್ಟಿಗೆ ಚುನಾವಣೆಗೆ ಹೋಗುತ್ತಿದ್ದೇವೆ, ಆದರೆ ಚಕ್ರವರ್ತಿಗೆ ಎಲ್ಲಾ ಇದೆ, ಧೈರ್ಯ ಕಡಿಮೆ ಎಂದು ಮಾಜಿ ಸಚಿವ ...

ಬೆಂಗಳೂರು: ಈ ಬಾರಿ ಚಕ್ರವರ್ತಿ ನೇತೃತ್ವದಲ್ಲಿ ಎಲ್ಲರೂ ಒಟ್ಟಿಗೆ ಚುನಾವಣೆಗೆ ಹೋಗುತ್ತಿದ್ದೇವೆ, ಆದರೆ  ಚಕ್ರವರ್ತಿಗೆ ಎಲ್ಲಾ ಇದೆ, ಧೈರ್ಯ ಕಡಿಮೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಮಾಜಿ ಡಿಸಿಎಂ ಆರ್ .ಅಶೋಕ್ ಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿನ ಸುತ್ತೂರು ಮಠಕ್ಕೆ ಬಿಜೆಪಿ  ಅಭ್ಯರ್ಥಿ ತೇಜಸ್ವಿನಿ ಅನಂತ್ ಕುಮಾರ್ ಸೋಮಣ್ಣ ಹಾಗೂ ಆರ್. ಅಶೋಕ್ ಜೊತೆಗೂಡಿ ಭೇಟಿ ಮಾಡಿದರು. ಸ್ವಾಮಿಗಳ ಎದುರೇ ಅಶೋಕ್ ಗೆ ಟಾಂಗ್ ಕೊಟ್ಟ ಸೋಮಣ್ಣ ಪೇಚಿಗೀಡಾದರು.
ಸೋಮಣ್ಣಗೆ ಟಕ್ಕರ್ ಕೊಟ್ಟ ಅಶೋಕ್, ಕೆಟ್ಟದಾದರೇ ಅಶೋಕ್ ಕಾರಣ ಅಂತಾ ಹೇಳುತ್ತಾರೆ, ಆದರೆ ಒಳ್ಳೆಯದಾದರೇ  ನಾನು ಲೆಕ್ಕಕ್ಕೆ ಇರುವುದಿಲ್ಲ, ಎಲ್ಲರನ್ನು ನನ್ನನ್ನು ಬಳಸಿಕೊಳ್ಳುತ್ಕಾರೆ, ಕೆಲಸ ಮುಗಿದ ಮೇಲೆ ನನ್ನನ್ನು ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ.
ಈ ಮಧ್ಯೆ ಮತ್ತೆ ಮಾತನಾಡಿದ ಸೋಮಣ್ಣ, ಅಶೋಕ್ ಮನಸ್ಸು ತುಂಬಾ ಒಳ್ಳೆಯದು, ಎಲ್ಲರು ಅವರ ವಿರುದ್ಧವಾಗಿದ್ದಾರೆ, ನಾನು ಮಾತ್ರ ಅವರ ಪರವಾಗಿದ್ದೇನೆ ಎಂದು ಸಮಾಧಾನ ಪಡಿಸಲು ಮುಂದಾದರು.
ಇನ್ನೂ ಇದೇ ವೇಳೆ ಮಾತನಾಡಿದ ಆರ್. ಅಶೋಕ್, ದಿವಂಗತ ಅನಂತ್ ಕುಮಾರ್ ಅವರ ಅನುಪಸ್ಥಿತಿಯಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ, ತೇಜಸ್ವಿನಿ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿಲಾಗಿದೆ, ಹೀಗಾಗಿ ಅವರ ಗೆಲುವಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT