ಸಿದ್ದರಾಮಯ್ಯ, ಸಾರಾ ಮಹೇಶ್ 
ರಾಜಕೀಯ

ಮಂಡ್ಯದಲ್ಲಿ ಕಾಂಗ್ರೆಸ್ ಕೈ ಕೊಟ್ರೆ, ಮೈಸೂರಲ್ಲಿ ಕೈ ಕೊಡ್ತೇವೆ: ಸಾರಾ ಮಹೇಶ್ ಹೇಳಿಕೆ ಸರಿಯಲ್ಲ-ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಕೈ ಕೊಟ್ರೆ, ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಾವು ಕೈ ಕೊಡ್ತೇವೆ ಎಂಬ ಸಚಿವ ಸಾರಾಮಹೇಶ್ ಹೇಳಿಕೆ ಸರಿಯಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್  ಕೈ ಕೊಟ್ರೆ, ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಾವು ಕೈ ಕೊಡ್ತೇವೆ ಎಂಬ ಸಚಿವ ಸಾರಾಮಹೇಶ್ ಹೇಳಿಕೆ ಸರಿಯಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪರಸ್ಪರ ನಂಬಿಕೆಯಿಂದ ಮೈತ್ರಿ ಮಾಡಿಕೊಂಡಿದ್ದೇವೆ.ಈ ರೀತಿಯ ಹೇಳಿಕೆಗಳಿಂದ ನಂಬಿಕೆ ಹಾಳಾಗುತ್ತದೆ.ನಂಬಿಕೆ ಬಗ್ಗೆ ಹೆಚ್ ಡಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಮಾತನಾಡಿದ್ದಾರಾ? ಅದನ್ನು ಬಿಟ್ಟು ಬೇರೆಯವರ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ತುಮಕೂರು ಕ್ಷೇತ್ರ ಜೆಡಿಎಸ್ ಪಾಲಾಗಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ತುಮಕೂರು ಉಳಿಸಿಕೊಳ್ಳಿ ಎಂದು ವರಿಷ್ಠರಿಗೆ ಹೇಳಿದ್ದೆ.  9 ಹಾಲಿ ಸಂಸದರಿಗೆ ಟಿಕೆಟ್ ಕೊಟ್ಟು ಒಬ್ಬರಿಗೆ ಕೊಡಲಿಲ್ಲ ಎಂದರೆ ಚೆನ್ನಾಗಿರಲ್ಲ  ಅಂತಾ ಮಾತನಾಡಿದ್ದೇನೆ. ಸೆಂಟ್ರಲ್ ಕಮಿಟಿ ಸಭೆ ಮುಗಿದ ಬಳಿಕ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT