ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು# ಮೈನ್ ಭೀ ಚೌಕಿದಾರ್ ಸಾಮಾಜಿಕ ಮಾಧ್ಯಮಗಳ ಪ್ರಚಾರಕ್ಕೆ ಚಾಲನೆ ನೀಡಿದ ನಂತರ ಕೇಂದ್ರ ಸಚಿವರು, ಬಿಜೆಪಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಇನ್ನಿತರ ನಾಯಕರು ಸೇರಿದಂತೆ ಎಲ್ಲರೂ ತಮ್ಮ ಟ್ವಿಟರ್ ಖಾತೆಯಲ್ಲಿ ಚೌಕಿದಾರ್ ಸೇರ್ಪಡೆ ಮಾಡಿಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಸದಾನಂದಗೌಡ, ಅನಂತ್ ಕುಮಾರ್ ಹೆಗ್ಗಡೆ, ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಪ್ರಹ್ಲಾದ್ ಜೋಷಿ ಎಲ್ಲರೂ ಖಾತೆಯ ಹೆಸರನ್ನೂ ಚೌಕಿದಾರ್ ಎಂದು ಬದಲಾಯಿಸಿಕೊಂಡಿದ್ದಾರೆ.
# ಮೈನ್ ಭೀ ಚೌಕಿದಾರ್ ಪ್ರಚಾರಾಂದೋಲನದಲ್ಲಿ ತೊಡಗಿಸಿಕೊಳ್ಳಲು ನನ್ನಗೆ ಹೆಮ್ಮೆಯಾಗುತ್ತದೆ. ಭಾರತವನ್ನು ಪ್ರೀತಿಸುವ ನಾಗರಿಕನಾಗಿ ಭ್ರಷ್ಟಚಾರ ಬಡತನ, ಭಯೋತ್ಪಾದನೆ ನಿರ್ಮೂಲನೆ ಹಾಗೂ ಸದೃಢ, ಸುಭದ್ರ, ಮತ್ತು ಸಂಪಜದ್ಭರಿತ ನವ ಭಾರತ ನಿರ್ಮಾಣಕ್ಕಾಗಿ ಕಾರ್ಯ ನಿರ್ವಹಿಸುವುದಾಗಿ ಯಡಿಯೂರಪ್ಪ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.