ರಾಜಕೀಯ

ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ ನಲ್ಲಿಯೇ ಉಳಿಸಿಕೊಳ್ಳಲು ಡಿಸಿಎಂ ಪರಮೇಶ್ವರ್ ಒಲವು?

Sumana Upadhyaya
ಬೆಂಗಳೂರು: ತುಮಕೂರು ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳಲು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಉತ್ಸುಕರಾಗಿದ್ದಾರೆ. ಸೀಟು ಹಂಚಿಕೆ ವೇಳೆ ಆದ ಒಪ್ಪಂದದಂತೆ ತುಮಕೂರಿನಲ್ಲಿ ಪ್ರಸ್ತುತ ಕಾಂಗ್ರೆಸ್ ಸಂಸದರಿದ್ದರೂ ಕೂಡ ಜೆಡಿಎಸ್ ಗೆ ಅನಿವಾರ್ಯವಾಗಿ ಬಿಟ್ಟುಕೊಡಬೇಕಾದ ಪರಿಸ್ಥಿತಿ ಬಂದಿದೆ.
ಈ ವಿಚಾರವನ್ನು ನಾನು ನಮ್ಮ ಪಕ್ಷದ ಹಿರಿಯ ನಾಯಕರು, ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಚರ್ಚಿಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದೇವೇಗೌಡರ ತೀರ್ಮಾನಕ್ಕಾಗಿ ನಾವು ಕಾಯುತ್ತಿದ್ದೇವೆ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವುದಾದರೆ ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.
SCROLL FOR NEXT