ಬೆಂಗಳೂರು: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಇಲ್ಲವೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಹೇಳಿದ್ದಾರೆ.
ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ನಾಯಕರು ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಕೇಳಿದ್ದಾರೆ. ಅದೇ ರೀತಿ ಈ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡುವಂತೆಯೂ ಕಾಂಗ್ರೆಸ್ ನಾಯಕರು ಕೋರಿದ್ದಾರೆ. ಹೀಗಾಗಿ ಮಾತುಕತೆ ಪ್ರಗತಿಯಲ್ಲಿದೆ ಎಂದರು.
ಹಾಗೊಂದು ವೇಳೆ ಕ್ಷೇತ್ರ ಬಿಟ್ಟು ಕೊಡದಿದ್ದರೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧ. ಪಕ್ಷ ಒಪ್ಪಿಕೊಂಡರೆ ಅಭ್ಯರ್ಥಿಯಾಗುತ್ತೇನೆ. ತಾವೇ ಅಭ್ಯರ್ಥಿ ಎಂಬುದು ಇನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್ ನಾಯಕರು ಒಪ್ಪಿಕೊಂಡರೆ ಜೆಡಿಎಸ್ ಚಿಹ್ನೆ ಅಡಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಪ್ರಮೋದ್ ಮಧ್ವರಾಜ್ ಹೇಳಿದರು.
ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಆದರೆ ಜೆಡಿಎಸ್ ನಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಎದುರಾಗಿದ್ದು, ಪ್ರಮೋದ್ ಮದ್ವರಾಜ್ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಜೆಡಿಎಸ್ ಗೆ ಸ್ವಾಗತಿಸಿದ್ದಾರೆ. ಪಕ್ಷ ಸೇರಿದರೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos