ಸುಮಲತಾ ಅಂಬರೀಶ್ 
ರಾಜಕೀಯ

ಸಾವಿರಾರು ಬೆಂಬಲಿಗರೊಂದಿಗೆ ಬಂದು ಸುಮಲತಾ ನಾಮಪತ್ರ ಸಲ್ಲಿಕೆ: ಯಶ್, ದರ್ಶನ್ ಸಾಥ್!

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸುಮಲತಾ ಅಂಬರೀಶ್ ಅವರು ಇಂದು ಸಾವಿರಾರು ಬೆಂಬಲಿಗರೊಂದಿಗೆ...

ಮಂಡ್ಯ: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸುಮಲತಾ ಅಂಬರೀಶ್ ಅವರು ಇಂದು ಸಾವಿರಾರು ಬೆಂಬಲಿಗರೊಂದಿಗೆ ಬಂದು ಪಕ್ಷೇತ್ತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ ಅವರು ನೇರವಾಗಿ ಮಂಡ್ಯ ತಾಲೂಕು ಇಂಡುವಾಳಿಗೆ ಆಗಮಿಸಿ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಅವರ ನಿವಾಸಕ್ಕೆ ತೆರಳಿದರು. ನಟ ಯಶ್ ಅವರೂ ಸಚ್ಚಿದಾನಂದ ನಿವಾಸಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸುಮಲತಾ ಅವರೊಂದಿಗೆ ಪುತ್ರ ಅಭಿಷೇಕ್, ನಟ ಯಶ್, ರಾಕಲೈನ್ ವೆಂಕಟೇಶ್, ದೊಡ್ಡಣ್ಣ, ಅಂಬರೀಶ್ ಸೋದರನ ಪುತ್ರ ಮಧುಸೂದನ್ ಸೇರಿದಂತೆ ಹಲವರು ಇದ್ದರು. 
ಸುಮಲತಾ ಅವರು ನಾಮಪತ್ರ ಸಲ್ಲಿಸುವ ವೇಳೆ ಕೆಲ ಕಾಂಗ್ರೆಸ್ ನಾಯಕರು, ಅಂಬರೀಶ್ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ಅಭಿಮಾನಿಗಳು ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. 
ನಾಮಪತ್ರ ಸಲ್ಲಿಸಿದ ನಂತರ ಸುಮಲತಾ ಅವರು ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶಕ್ಕೆ ಮೆರವಣಿಗೆ ಮೂಲಕ ತೆರಳಿದರು. 
ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸುಮಲತಾ ಅವರನ್ನು  ಬೆಂಬಲಿಸುತ್ತಿದ್ದು, ಸಂಧಾನಕ್ಕಾಗಿ ಪಕ್ಷದ ವರಿಷ್ಠರು ಜಿಲ್ಲೆಗೆ ಆಗಮಿಸುವುದು ಬೇಡ.  ಜಿಲ್ಲೆಯಲ್ಲಿ ಪಕ್ಷದ ಉಳಿವಿಗಾಗಿ ಸುಮಲತಾ ಅವರಿಗೆ ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಇಂಡುವಾಳು  ಸಚ್ಚಿದಾನಂದ ಹೇಳಿಕೆ ನೀಡಿದ್ದರು.

ಅದರಂತೆ ಇಂದು ಸುಮಲತಾ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸುಮಲತಾ ಪರವಾಗಿ ಮೂವತ್ತು ಸೂಚಕರು ಸಹಿ ಹಾಕಿದ್ದು,  ಕೆಪಿಸಿಸಿ ಸದಸ್ಯ ಇಂಡುವಾಳು  ಸಚ್ಚಿದಾನಂದ ಸೇರಿದಂತೆ ಮಂಡ್ಯ ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರು ಸುಮಲತಾ ನಾಮಪತ್ರ  ಸಲ್ಲಿಕೆ ವೇಳೆ ಹಾಜರಿದ್ದರು. 

ಮೆರವಣಿಗೆಯಲ್ಲಿ ಚಿತ್ರರಂಗದ ಗಣ್ಯರಾದ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ನಟ  ದೊಡ್ಡಣ್ಣ, ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ಸೇರಿದಂತೆ ಅನೇಕ ನಟ ನಟಿಯರು  ಭಾಗಿಯಾಗಿದ್ದರು.

ನಾಮಪತ್ರ ಸಲ್ಲಿಕೆ ಹಾಗೂ ಜಾಥಾ ಸಂದರ್ಭದಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT