ಸುಮಲತಾ ನಾಮಪತ್ರ ಸಲ್ಲಿಕೆ ವೇಳೆ ನೆರೆದಿದ್ದ ಜನಸ್ತೋಮ 
ರಾಜಕೀಯ

'ನಾನು ಮಳವಳ್ಳಿ ಹುಚ್ಚೇಗೌಡರ ಸೊಸೆ, ನಿಮ್ಮ ಪ್ರೀತಿಯ ಅಂಬರೀಷ್ ಅವರ ಧರ್ಮಪತ್ನಿ'

ಮಂಡ್ಯ ಲೋಕಸಭಾ ಚುನಾವಣಾ ಕಣ ರಣರಂಗವಾಗಿದ್ದು, ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ವಿರುದ್ಧ ಸುಮಲತಾ ಅಂಬರೀಶ್​​ ಸ್ವತಂತ್ರ ...

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಕಣ ರಣರಂಗವಾಗಿದ್ದು, ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ವಿರುದ್ಧ ಸುಮಲತಾ ಅಂಬರೀಶ್​​ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. 
ಬುಧವಾರ ಡಿಸಿ ಕಚೇರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸುಮಲತಾ ಅವರಿಗೆ ಬೆಂಬಲ ಸೂಚಿಸಲು ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. 
ನಾವುಪತ್ರ ಸಲ್ಲಿಸಿದ ನಂತರ ಮಾತನಾಡಿದ ಸುಮಲತಾ, 'ನಾನು ಮಳವಳ್ಳಿ ಹುಚ್ಚೇಗೌಡರ ಸೊಸೆ, ನಿಮ್ಮ ಪ್ರೀತಿಯ ಅಂಬರೀಷ್ ಅವರ ಧರ್ಮಪತ್ನಿ, ಈ ಮಣ್ಣಿನ ಮಗಳು, 40 ವರ್ಷದಿಂದ ಚಿತ್ರರಂಗದಲ್ಲಿ ಇದ್ದೇನೆ, 5 ಭಾಷೆಯ ಚಿತ್ರಗಳಲ್ಲಿ ನಟಿಸಿದ್ದೇನೆ,  27 ವರ್ಷಗಳಿಂದ ಅಂಬರೀಷ್ ಪತ್ನಿಯಾಗಿದ್ದೇನೆ,  ಯಾರು ಎಂದು ಪ್ರಶ್ನಿಸಿದವರಿಗೆ ಇದೇ ನನ್ನ ಉತ್ತರ, ಕೆಲರ ಮಾತಿನಿಂದ ನೋವಾಗಿದೆ,  ಹೆಣ್ಣಾಗಿ ಅವಮಾನ ನುಂಗಿಕೊಂಡಿದ್ದೇನೆ, ಅವರ ಮಾತುಗಳಿಗೆ ಜನರೇ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ನಾನು ಇಲ್ಲಿ ಹೊಸದಾಗಿ ಗುರುತಿಸಿಕೊಳ್ಳಲು ಬಂದಿಲ್ಲ, 200 ಸಿನಿಮಾಗಳಲ್ಲಿ ನಟಿಸಿರುವ ನನನೆ ನನ್ನದೇ ಆದ ವ್ಯಕ್ತಿತ್ವ ಇದೆ, ಮಂಡ್ಯ ಜನರ ಪ್ರೀತಿಗಾಗಿ ನಾನು ಇಲ್ಲಿ ಬಂದಿದ್ದೇನೆ ಎಂದು ಹೇಳಿದ ಸುಮಲತಾ, ತಮ್ಮ ಪತಿ ಅಂಬರೀಷ್ ಮಂಡ್ಯಕ್ಕಾಗಿ ಮಾಡಿದ ಕೆಲಸಗಳನ್ನು ಬಗ್ಗೆ ಹೇಳಿದಕು, ಮಂಡ್ಯ ಮೆಡಿಕಲ್ ಕಾಲೇಜು ತರಲು ಅಂಬರೀಷ್ ಕಾರಣ,  ಆದರೆ  ನನ್ನ ಪತಿಗೆ ಯಾವುದೇ ಕ್ರೆಡಿಟ್ ಮೇಲೆ ನಂಬಿಕೆ ಇರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT