ಸುಮಲತಾ ನಾಮಪತ್ರ ಸಲ್ಲಿಕೆ ವೇಳೆ ನೆರೆದಿದ್ದ ಜನಸ್ತೋಮ 
ರಾಜಕೀಯ

'ನಾನು ಮಳವಳ್ಳಿ ಹುಚ್ಚೇಗೌಡರ ಸೊಸೆ, ನಿಮ್ಮ ಪ್ರೀತಿಯ ಅಂಬರೀಷ್ ಅವರ ಧರ್ಮಪತ್ನಿ'

ಮಂಡ್ಯ ಲೋಕಸಭಾ ಚುನಾವಣಾ ಕಣ ರಣರಂಗವಾಗಿದ್ದು, ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ವಿರುದ್ಧ ಸುಮಲತಾ ಅಂಬರೀಶ್​​ ಸ್ವತಂತ್ರ ...

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಕಣ ರಣರಂಗವಾಗಿದ್ದು, ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ವಿರುದ್ಧ ಸುಮಲತಾ ಅಂಬರೀಶ್​​ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. 
ಬುಧವಾರ ಡಿಸಿ ಕಚೇರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸುಮಲತಾ ಅವರಿಗೆ ಬೆಂಬಲ ಸೂಚಿಸಲು ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. 
ನಾವುಪತ್ರ ಸಲ್ಲಿಸಿದ ನಂತರ ಮಾತನಾಡಿದ ಸುಮಲತಾ, 'ನಾನು ಮಳವಳ್ಳಿ ಹುಚ್ಚೇಗೌಡರ ಸೊಸೆ, ನಿಮ್ಮ ಪ್ರೀತಿಯ ಅಂಬರೀಷ್ ಅವರ ಧರ್ಮಪತ್ನಿ, ಈ ಮಣ್ಣಿನ ಮಗಳು, 40 ವರ್ಷದಿಂದ ಚಿತ್ರರಂಗದಲ್ಲಿ ಇದ್ದೇನೆ, 5 ಭಾಷೆಯ ಚಿತ್ರಗಳಲ್ಲಿ ನಟಿಸಿದ್ದೇನೆ,  27 ವರ್ಷಗಳಿಂದ ಅಂಬರೀಷ್ ಪತ್ನಿಯಾಗಿದ್ದೇನೆ,  ಯಾರು ಎಂದು ಪ್ರಶ್ನಿಸಿದವರಿಗೆ ಇದೇ ನನ್ನ ಉತ್ತರ, ಕೆಲರ ಮಾತಿನಿಂದ ನೋವಾಗಿದೆ,  ಹೆಣ್ಣಾಗಿ ಅವಮಾನ ನುಂಗಿಕೊಂಡಿದ್ದೇನೆ, ಅವರ ಮಾತುಗಳಿಗೆ ಜನರೇ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ನಾನು ಇಲ್ಲಿ ಹೊಸದಾಗಿ ಗುರುತಿಸಿಕೊಳ್ಳಲು ಬಂದಿಲ್ಲ, 200 ಸಿನಿಮಾಗಳಲ್ಲಿ ನಟಿಸಿರುವ ನನನೆ ನನ್ನದೇ ಆದ ವ್ಯಕ್ತಿತ್ವ ಇದೆ, ಮಂಡ್ಯ ಜನರ ಪ್ರೀತಿಗಾಗಿ ನಾನು ಇಲ್ಲಿ ಬಂದಿದ್ದೇನೆ ಎಂದು ಹೇಳಿದ ಸುಮಲತಾ, ತಮ್ಮ ಪತಿ ಅಂಬರೀಷ್ ಮಂಡ್ಯಕ್ಕಾಗಿ ಮಾಡಿದ ಕೆಲಸಗಳನ್ನು ಬಗ್ಗೆ ಹೇಳಿದಕು, ಮಂಡ್ಯ ಮೆಡಿಕಲ್ ಕಾಲೇಜು ತರಲು ಅಂಬರೀಷ್ ಕಾರಣ,  ಆದರೆ  ನನ್ನ ಪತಿಗೆ ಯಾವುದೇ ಕ್ರೆಡಿಟ್ ಮೇಲೆ ನಂಬಿಕೆ ಇರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT